ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂತ್ವನ ಕೇಂದ್ರ ಮುಚ್ಚುವುದಿಲ್ಲ: ಸಚಿವೆ

Last Updated 18 ಜೂನ್ 2021, 17:50 IST
ಅಕ್ಷರ ಗಾತ್ರ

ಹಾಸನ: ಸರ್ಕಾರದ ಅನುದಾಡಿ ನಡೆಯುತ್ತಿರುವ ಮಹಿಳಾ ಸಂತ್ವಾನ ಕೇಂದ್ರಗಳನ್ನು ಮುಚ್ಚುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 194 ಸಾಂತ್ವನ ಕೇಂದ್ರಗಳ ಪೈಕಿ 71 ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಲಾಗಿತ್ತು.ಕೇಂದ್ರಗಳು ನೊಂದವರ ಬಾಳಲ್ಲಿ ಬೆಳಕು ಮೂಡಿಸಲು ಯತ್ನಿಸುತ್ತಿವೆ. ಉತ್ತಮರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಮುಖ್ಯಮಂತ್ರಿ ಜತೆ ಚರ್ಚಿಸಿ ರದ್ದು ಆದೇಶವನ್ನು ಗುರುವಾರ ಹಿಂಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದರು.

ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ಕುರಿತು ಪ್ರಯೋಗ ನಡೆಯುತ್ತಿದೆ. ಯಶಸ್ವಿಯಾದ ಬಳಿಕ ಯಾವ ಹಂತದಲ್ಲಿ ಲಸಿಕೆ ನೀಡಬೇಕು ಎಂಬುದನ್ನು ತಜ್ಞರ ಜತೆ ಚರ್ಚಿಸಿ ನಿರ್ಧಾರಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆ ಒಳಗಾಗಿರುವ 89 ಮಕ್ಕಳಿದ್ದಾರೆ. ಅಪೌಷ್ಟಿಕ ಮಕ್ಕಳ ಮರು ಸಮೀಕ್ಷೆ ಮಾಡಲು ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಕ್ರಮವಹಿಸಬೇಕು. ಇಲಾಖೆವತಿಯಿಂದ ಮೊದಲು ನೀಡುತ್ತಿದ್ದ ಆಹಾರದ ಜೊತೆಗೆಪೌಷ್ಟಿಕಾಂಶ ಹೆಚ್ಚಿಸಲು ಕಿಟ್ವಿತರಣೆಗೆ ಕ್ರಮ ವಹಿಸಲಾಗುವುದು. 620 ವಲಸೆ ಮಕ್ಕಳು ಮತ್ತು 120 ಗರ್ಭಿಣಿಯರಿಗೂ ಪೌಷ್ಟಿಕ ಆಹಾರ ಕಿಟ್‌ ವಿತರಿಸಲಾಗುತ್ತಿದೆಎಂದರು.

ಜಿಲ್ಲೆಯಲ್ಲಿ 23 ಮಕ್ಕಳ ತಜ್ಞರ ಪೈಕಿ ಹತ್ತು ಹುದ್ದೆ ಖಾಲಿ ಇದೆ. ಆರೋಗ್ಯ ಸಚಿವರ ಜತೆಚರ್ಚಿಸಿ ಭರ್ತಿ ಮಾಡಲಾಗುವುದು. ಕಳೆದ ವರ್ಷ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ123 ದೂರುಗಳು ಬಂದಿದ್ದು, 79 ಮದುವೆಗಳನ್ನು ಅಧಿಕಾರಿಗಳು ತಡೆದಿದ್ದಾರೆ. 31ಪ್ರಕರಣಗಳಲ್ಲಿ ಎಫ್‌ಐಆರ್‌ ಆಗಿದೆ ಎಂದು ನುಡಿದರು.

ಶಾಸಕ ಪ್ರೀತಂ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT