ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ 19: ಒಂದೇ ದಿನ 314 ಮಂದಿ ಗುಣಮುಖ

ಕೋವಿಡ್‌–19ನಿಂದ ಐದು ಮಂದಿ ಸಾವು, 220 ಜನರಿಗೆ ಸೋಂಕು ದೃಢ
Last Updated 9 ಸೆಪ್ಟೆಂಬರ್ 2020, 2:49 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಮಂಗಳವಾರ 314 ಮಂದಿ ಕೋವಿಡ್‌–19ನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 7,242 ಜನ ಸೋಂಕು ಮುಕ್ತರಾಗಿದ್ದಾರೆ.

ಕೋವಿಡ್‌ಗೆ ಮತ್ತೆ 5 ಜನ ಮೃತಪಟ್ಟಿದ್ದು, ಇದರೊಂದಿಗೆ ಮೃತರ ಸಂಖ್ಯೆ 228ಕ್ಕೆ ಏರಿಕೆಯಾಗಿದೆ. ಹೊಸದಾಗಿ 220 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 10,387ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚನ್ನರಾಯಪಟ್ಟಣ ತಾಲ್ಲೂಕಿನ 56 ವರ್ಷದ ಪುರುಷ, ಆಲೂರು ತಾಲ್ಲೂಕಿನ 48 ವರ್ಷದ ಮಹಿಳೆ, ಅರಸೀಕೆರೆ ತಾಲ್ಲೂಕಿನ 57 ವರ್ಷದ ಪುರುಷ, ಅರಕಲಗೂಡು ತಾಲ್ಲೂಕಿನ 45 ವರ್ಷದ ಪುರುಷ ಹಾಗೂ ಸಕಲೇಶಪುರ ತಾಲ್ಲೂಕಿನ 75 ವರ್ಷದ ವೃದ್ಧ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಮೃತಪಟ್ಟಿದ್ದಾರೆ. ಸರ್ಕಾರದ ಮಾರ್ಗಸೂಚಿಯಂತೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 2,917 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 53 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಮಂಗಳವಾರ ಪತ್ತೆಯಾದ 220 ಕೋವಿಡ್‌ ಪ್ರಕರಣಗಳಲ್ಲಿ 37 ಮಂದಿ ಅರಸೀಕೆರ, 34 ಮಂದಿ ಚನ್ನರಾಯಪಟ್ಟಣ, ಆಲೂರು ತಾಲ್ಲೂಕಿನಲ್ಲಿ ಒಬ್ಬರು, 93 ಮಂದಿ ಹಾಸನ, 7 ಜನ ಹೊಳೆನರಸೀಪುರ, ಒಬ್ಬರು ಅರಕಲಗೂಡು, ಬೇಲೂರು ತಾಲ್ಲೂಕಿನ 16 ಜನ, ಸಕಲೇಶಪುರ ತಾಲ್ಲೂಕಿನ 30 ಜನರಿಗೆ ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT