ಕೋವಿಡ್ನಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕುಟುಂಬ ರಕ್ಷಿಸಿಕೊಳ್ಳಲು ಸರಿಯಾದ ಆರೋಗ್ಯ ವ್ಯವಸ್ಥೆ ಸಿಗುತ್ತಿಲ್ಲ. ಮತ್ತೊಂದೆಡೆ ಕೃಷಿ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ಮತ್ತು ಬೆಲೆ ಸಿಗದೆ ಪರದಾಡುವಂತಾಗಿದೆ. ಗ್ರಾಮ ಪಂಚಾಯಿತಿಗಳು, ರೈತ ಸಂಪರ್ಕ ಕೇಂದ್ರಗಳು, ಕೃಷಿ, ತೋಟಗಾರಿಕೆ ಮತ್ತುಪಶುಸಂಗೋಪನಾ ಇಲಾಖೆಗಳು ರೈತರಿಗೆ ಅಗತ್ಯ ನೆರವು ನೀಡುತ್ತಿಲ್ಲ. ರೈತರಿಗೆ ಯೋಜನೆಗಳನ್ನುತಲುಪಿಸದೇ ಮೋಸ ಮಾಡುತ್ತಿವೆ ಎಂದು ಆರೋಪಿಸಿದರು.
ಬಿತ್ತನೆ ಬೀಜ, ರಸಗೊಬ್ಬರ, ಪ್ಲಾಸ್ಟಿಕ್ ಪೈಪು, ಯಂತ್ರೋಪಕರಣ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ(ಗ್ಯಾಸ್) ಇವುಗಳ ಜೊತೆಗೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿಸಲಾಗಿದೆ. ದುಬಾರಿ ವೆಚ್ಚಗಳನ್ನು ಪೂರೈಸಲು ರೈತರು ಸಾಲದ ಮೊರೆ ಹೋಗಬೇಕಾಗಿದೆ. ಮುಂದಿನ ದಿನಗಳಲ್ಲಿ ಬಡ, ಮಧ್ಯಮ ರೈತರು ಕೃಷಿ ಬಿಟ್ಟು ನಗರಗಳಿಗೆ ವಲಸೆ ಹೋಗಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.