ಸ್ನೇಕ್ ಬಾಬು ಅವರು ಸ್ನೇಹಿತರಾದ ಮುಕ್ತಿಯಾರ್, ಅಯೂಬ್, ಮುಮ್ತಾಜ್ ಅವರನ್ನೊಳಗೊಂಡ ತಂಡವನ್ನು ರಚಿಸಿಕೊಂಡಿದ್ದಾರೆ. ದಾರಿಹೋಕರು, ಮಾನಸಿಕ ಅಸ್ವಸ್ಥರನ್ನು ಗುರುತಿಸಿ, ಅವರನ್ನು ಶುಚಿಗೊಳಿಸುತ್ತಾರೆ. ಬಳಿಕ, ಅಧಿಕಾರಿಗಳ ಗಮನಕ್ಕೆ ತಂದು, ಪುನರ್ವಸತಿ ಕಲ್ಪಿಸುವ ಕೆಲಸದಲ್ಲಿ ತೊಡಗಿದ್ದಾರೆ. ಯಾವುದೇ ಪ್ರತಿಫಲಾ ಪೇಕ್ಷೆ ಇಲ್ಲದೆ ಕೆಲಸ ಮಾಡುತ್ತಿದ್ದಾರೆ.