<p><strong>ಚನ್ನರಾಯಪಟ್ಟಣ:</strong> 14 ವರ್ಷದೊಳಗಿನ ರಾಜ್ಯಮಟ್ಟದ ಬಾಲಕರ ಕ್ರಿಕೆಟ್ ಟೂರ್ನಿಯಲ್ಲಿ ಬೆಳಗಾವಿ ವಿಭಾಗ ತಂಡ ಪ್ರಥಮ ಸ್ಥಾನಗಳಿಸಿ ಟ್ರೋಫಿ ಎತ್ತಿ ಹಿಡಿಯಿತು</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಹಾಗೂ ಎ 1 ಕ್ರೀಡಾ ಅಕಾಡೆಮಿಯ ಸಹಯೋಗದಲ್ಲಿ ಪಟ್ಟಣದಲ್ಲಿ ಶನಿವಾರ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಎದುರಾಳಿ ಕಲಬುರ್ಗಿ ವಿಭಾಗದ ತಂಡವನ್ನು 9 ವಿಕೆಟ್ಗಳಿಂದ ಸೋಲಿಸಿದ ಬೆಳಗಾವಿ ತಂಡ ಪ್ರಥಮ ಪ್ರಶಸ್ತಿ ತನ್ನದಾಗಿಸಿಕೊಂಡಿತು.</p>.<p>ಮೊದಲು ಬ್ಯಾಟಿಂಗ್ ಮಾಡಿದ ಕಲಬುರ್ಗಿ ತಂಡ ನಿಗದಿತ 8 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 37 ರನ್ ಗಳಿಸಿತು. ಇದನ್ನು ಬೆನ್ನಟ್ಟಿದ ಬೆಳಗಾವಿ ತಂಡ 5.3 ಓವರ್ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು 38 ರನ್ ಗಳಿಸುವ ಮೂಲಕ ಜಯಗಳಿಸಿತು.</p>.<p>ಕಲಬುರ್ಗಿ ತಂಡದ ಜಿ. ಅನಿಕೇತ್, 9 ವಿಕೆಟ್ ಪಡೆದು ಟೂರ್ನಿಯಲ್ಲಿ ಉತ್ತಮ ಬೌಲರ್ ಪ್ರಶಸ್ತಿ ಪಡೆದರೆ, 120 ರನ್ ಗಳಿಸಿದ ಬೆಳಗಾವಿ ತಂಡದ ವಿನಾಯಕ್ ಪಾಂಡ್ಯ, ಉತ್ತಮ ಬ್ಯಾಟ್ಸ್ಮನ್ ಪ್ರಶಸ್ತಿ ಪಡೆದರು.<br />ಎರಡು ದಿನ ನಡೆದ ಪಂದ್ಯಾವಳಿಯಲ್ಲಿ ಬೆಂಗಳೂರು, ಮೈಸೂರು, ಕಲಬುರ್ಗಿ, ಬೆಳಗಾವಿ ತಂಡಗಳು ಭಾಗವಹಿಸಿದ್ದವು, ಪಂದ್ಯಾವಳಿ ಲೀಗ್ ಮಾದರಿಯಲ್ಲಿ ನಡೆಯಿತು.</p>.<p>ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಬೆಳಗಾವಿ ತಂಡದ 11 ಹಾಗೂ ದ್ವಿತೀಯ ಸ್ಥಾನಗಳಿಸಿದ ಕಲಬುರ್ಗಿ ತಂಡದ 5 ಆಟಗಾರರು ಉತ್ತರ ಪ್ರದೇಶದ ಆಗ್ರಾದಲ್ಲಿ ಈ ತಿಂಗಳ ಅಂತ್ಯದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ:</strong> 14 ವರ್ಷದೊಳಗಿನ ರಾಜ್ಯಮಟ್ಟದ ಬಾಲಕರ ಕ್ರಿಕೆಟ್ ಟೂರ್ನಿಯಲ್ಲಿ ಬೆಳಗಾವಿ ವಿಭಾಗ ತಂಡ ಪ್ರಥಮ ಸ್ಥಾನಗಳಿಸಿ ಟ್ರೋಫಿ ಎತ್ತಿ ಹಿಡಿಯಿತು</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಹಾಗೂ ಎ 1 ಕ್ರೀಡಾ ಅಕಾಡೆಮಿಯ ಸಹಯೋಗದಲ್ಲಿ ಪಟ್ಟಣದಲ್ಲಿ ಶನಿವಾರ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಎದುರಾಳಿ ಕಲಬುರ್ಗಿ ವಿಭಾಗದ ತಂಡವನ್ನು 9 ವಿಕೆಟ್ಗಳಿಂದ ಸೋಲಿಸಿದ ಬೆಳಗಾವಿ ತಂಡ ಪ್ರಥಮ ಪ್ರಶಸ್ತಿ ತನ್ನದಾಗಿಸಿಕೊಂಡಿತು.</p>.<p>ಮೊದಲು ಬ್ಯಾಟಿಂಗ್ ಮಾಡಿದ ಕಲಬುರ್ಗಿ ತಂಡ ನಿಗದಿತ 8 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 37 ರನ್ ಗಳಿಸಿತು. ಇದನ್ನು ಬೆನ್ನಟ್ಟಿದ ಬೆಳಗಾವಿ ತಂಡ 5.3 ಓವರ್ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು 38 ರನ್ ಗಳಿಸುವ ಮೂಲಕ ಜಯಗಳಿಸಿತು.</p>.<p>ಕಲಬುರ್ಗಿ ತಂಡದ ಜಿ. ಅನಿಕೇತ್, 9 ವಿಕೆಟ್ ಪಡೆದು ಟೂರ್ನಿಯಲ್ಲಿ ಉತ್ತಮ ಬೌಲರ್ ಪ್ರಶಸ್ತಿ ಪಡೆದರೆ, 120 ರನ್ ಗಳಿಸಿದ ಬೆಳಗಾವಿ ತಂಡದ ವಿನಾಯಕ್ ಪಾಂಡ್ಯ, ಉತ್ತಮ ಬ್ಯಾಟ್ಸ್ಮನ್ ಪ್ರಶಸ್ತಿ ಪಡೆದರು.<br />ಎರಡು ದಿನ ನಡೆದ ಪಂದ್ಯಾವಳಿಯಲ್ಲಿ ಬೆಂಗಳೂರು, ಮೈಸೂರು, ಕಲಬುರ್ಗಿ, ಬೆಳಗಾವಿ ತಂಡಗಳು ಭಾಗವಹಿಸಿದ್ದವು, ಪಂದ್ಯಾವಳಿ ಲೀಗ್ ಮಾದರಿಯಲ್ಲಿ ನಡೆಯಿತು.</p>.<p>ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಬೆಳಗಾವಿ ತಂಡದ 11 ಹಾಗೂ ದ್ವಿತೀಯ ಸ್ಥಾನಗಳಿಸಿದ ಕಲಬುರ್ಗಿ ತಂಡದ 5 ಆಟಗಾರರು ಉತ್ತರ ಪ್ರದೇಶದ ಆಗ್ರಾದಲ್ಲಿ ಈ ತಿಂಗಳ ಅಂತ್ಯದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>