ತಾಲ್ಲೂಕು ಕಚೇರಿಯಲ್ಲಿ ಈಚೆಗೆ ಏರ್ಪಡಿಸಿದ್ದ ಮುಂಗಾರು ಹಂಗಾಮಿನ ಮಳೆ, ಬೆಳೆ ಪರಿಸ್ಥಿತಿ ಮತ್ತು ಬೆಳೆವಿಮೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಬೆಳೆ ವಿಮಾ ಯೋಜನೆಯ ಅನುಕೂಲವನ್ನು ರೈತರಿಗೆ ಒದಗಿಸಲು ಕಂದಾಯ, ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ರಾಗಿ ಬೆಳೆಗೆ ವಿಮೆ ಮಾಡಿಸಲು ಇದೇ ತಿಂಗಳು 16 ಕೊನೆಯ ದಿನಾಂಕವಾಗಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಿ ಹೆಚ್ಚಿನ ಪ್ರಚಾರ ನೀಡುವ ಮೂಲಕ ಬೆಳೆವಿಮೆ ಪಾವತಿಸಲು ರೈತರಿಗೆ ತಿಳಿಹೇಳಬೇಕು. ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣೆ ಮಾಡಿಸಬೇಕು ಎಂದರು.