ಜಮೀನಿಗೆ ನುಗ್ಗಿದ ಕಾಡಾನೆಗಳು ಸುಮಾರು 200ಕ್ಕೂ ಹೆಚ್ಚು ಅಡಿಕೆ ಮರಗಳನ್ನು, 50ಕ್ಕೂ ಹೆಚ್ಚು ಕಾಫಿ ಗಿಡಗಳನ್ನು, ಏಲಕ್ಕಿ, ಬಾಳೆ ಹಾಗೂ ಇನ್ನಿತರ ಬೆಳೆಗಳನ್ನು ನಾಶ ಮಾಡಿವೆ ಎಂದು ರೈತ ಧರ್ಮೇಗೌಡ ಅಳಲು ತೋಡಿಕೊಂಡಿದ್ದಾರೆ. ನೀರು ಹಾಯಿಸುವ ಪೈಪ್ಗಳನ್ನು ಸಹ ತುಳಿದು ಪುಡಿ ಮಾಡಿ ಭಾರೀ ಪ್ರಮಾಣದ ನಷ್ಟ ಉಂಟುಮಾಡಿದೆ ಎಂದು ತಿಳಿಸಿದ್ದಾರೆ.