ಇದಕ್ಕೂ ಮುನ್ನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಆರ್.ಗಿರೀಶ್, ಪಂಚೇಂದ್ರಿಯಗಳಲ್ಲಿ ಕಿವಿ ಅತ್ಯಂತ ಪ್ರಮುಖವಾಗಿದ್ದು, ಶ್ರವಣ ದೋಷದಿಂದ ಬಳಲುತ್ತಿರುವವರು ಸೂಕ್ತ ಚಿಕತ್ಸೆ ಪಡೆಯುವಂತೆ ಜಾಗೃತಿ ಮೂಡಿಸಬೇಕು.2016 ರಿಂದ ವಿಶ್ವ ಶ್ರವಣ ದಿನ ಆಚರಿಸಲಾಗುತ್ತಿದೆ. ಶ್ರವಣ ದೋಷದ ಅರಿವು ಹಾಗೂ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.