ಹಾಸನ ಜಿಲ್ಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಜನರಿಗೆ ಕರೆಂಟ್ ಶಾಕ್ ತಗುಲಿದ ಘಟನೆ ನಡೆದಿದೆ. ವರ್ಷಕ್ಕೆ ಒಂದು ಬಾರಿ ತೆರೆಯಲ್ಪಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್ 2 ರಿಂದ ತೆರೆದಿದೆ. ಶುಕ್ರವಾರ ಮಧ್ಯಾಹ್ನ 1.30ರ ವೇಳೆ ಉಚಿತ ದರ್ಶನದ ಸಾಲಿನಲ್ಲಿ ಹಾಕಿದ್ದ ಬ್ಯಾರಿಕೇಡ್ನಲ್ಲಿ ವಿದ್ಯುತ್ ಪ್ರವಹಿಸಿದೆ.