ನಗರದ ಎಪಿಎಂಸಿ ಎದುರಿನ 80 ಅಡಿ ರಸ್ತೆಯಿಂದ ಆರಂಭವಾದ ಸೈಕಲ್ ಜಾಥಾದಲ್ಲಿ 800ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಸಂತೆಪೇಟೆ ವೃತ್ತ, ಎನ್.ಆರ್. ವೃತ್ತ, ಹೇಮಾವತಿ ಪ್ರತಿಮೆ, ಸಾಲಗಾಮೆ ರಸ್ತೆ, ಎಂ.ಜಿ. ರಸ್ತೆ ಹಾಗೂ ಬಿ.ಎಂ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು.