<p><strong>ಹಾಸನ : </strong>ನಗರದ ಗೊರೂರು ರಸ್ತೆಯಲ್ಲಿ ನಡೆಯುತ್ತಿರುವ ದನಗಳ ಜಾತ್ರೆಗೆ ಮೂಲ ಸೌಕರ್ಯ ಒದಗಿಸಿಲ್ಲ ಎಂದು ಆರೋಪಿಸಿ ರೈತರು ತಮ್ಮ ರಾಸುಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ದನಗಳ ಜಾತ್ರೆಗೆ ಶತಮಾನಗಳ ಇತಿಹಾಸ ಇದೆ. ಸರ್ಕಾರ, ಜಿಲ್ಲಾಡಳಿತ, ನಗರಸಭೆ ಉತ್ಸಾಹ ತೋರದೇ ಮೂಲ ಸೌಕರ್ಯ ಕಲ್ಪಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<p>ದನಗಳಿಗೆ ಕುಡಿಯಲು ನೀರು, ಮೇವು ಸಹ ಲಭ್ಯವಿಲ್ಲ. ಬೆಳಗ್ಗೆಯಿಂದ ಸಂಜೆವರೆಗೂ ಬಿಸಿಲಿನಲ್ಲೇ ನಿಲ್ಲಬೇಕಿದೆ. ಬಿಸಿಲಿನಿಂದ ರಕ್ಷಣೆ ಪಡೆಯಲು ಪೆಂಡಾಲ್ ವ್ಯವಸ್ಥೆ ಮಾಡಬೇಕು ಎಂದು ರೈತರು ಆಗ್ರಹಿಸಿದರು.</p>.<p>ಹಾಸನ, ಬೇಲೂರು, ಹಳೇಬೀಡು, ಶ್ರವಣಬೆಳಗೋಳ, ಚನ್ನರಾಯಪಟ್ಟಣ, ಅರಕಲಗೂಡು, ಅರಸೀಕೆರೆ ಸೇರಿದಂತೆ ಹೊರ ಜಿಲ್ಲೆಗಳಿಂದ ರೈತರು ದನಗಳನ್ನು ಜಾತ್ರೆಗೆ ಕರೆ ತರುತ್ತಾರೆ. ನಿತ್ಯ ನೂರಾರು ಜಾನುವಾರುಗಳು ಮಾರಾಟವಾಗುತ್ತವೆ. ಹಿಂದೆ ಉತ್ತಮ ತಳಿಯ ಜಾನುವಾರುಗಳಿಗೆ ಬಹುಮಾನ ನೀಡಲಾಗಿತ್ತು. ಆದರೆ ಈಗ ಬಹುಮಾನ ನೀಡುವುದನ್ನು ನಿಲ್ಲಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.<br /><br />ಅಳವಡಿಸಿರುವ ವಿದ್ಯುತ್ ಕಂಬಗಳು ಜೋರು ಗಾಳಿಗೆ ಕೆಳಗೆ ಬಿದ್ದು, ರೈತರೊಬ್ಬರಿಗೆ ಪೆಟ್ಟಾಗಿದೆ. ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಐದಾರು ಹೊಲಿಗೆ ಹಾಕಲಾಗಿದೆ. ಈ ರೀತಿ ಅವಘಡ ಸಂಭವಿಸಿದರೆ ಅವರನ್ನೇ ನಂಬಿಕೊಂಡಿರುವ ಕುಟುಂಬ ಸದಸ್ಯರಿಗೆ ಯಾರು ದಿಕ್ಕು ಎಂದು ಮುದ್ದಳ್ಳಿ ರೈತ ಜವರೇಗೌಡ ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ : </strong>ನಗರದ ಗೊರೂರು ರಸ್ತೆಯಲ್ಲಿ ನಡೆಯುತ್ತಿರುವ ದನಗಳ ಜಾತ್ರೆಗೆ ಮೂಲ ಸೌಕರ್ಯ ಒದಗಿಸಿಲ್ಲ ಎಂದು ಆರೋಪಿಸಿ ರೈತರು ತಮ್ಮ ರಾಸುಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ದನಗಳ ಜಾತ್ರೆಗೆ ಶತಮಾನಗಳ ಇತಿಹಾಸ ಇದೆ. ಸರ್ಕಾರ, ಜಿಲ್ಲಾಡಳಿತ, ನಗರಸಭೆ ಉತ್ಸಾಹ ತೋರದೇ ಮೂಲ ಸೌಕರ್ಯ ಕಲ್ಪಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<p>ದನಗಳಿಗೆ ಕುಡಿಯಲು ನೀರು, ಮೇವು ಸಹ ಲಭ್ಯವಿಲ್ಲ. ಬೆಳಗ್ಗೆಯಿಂದ ಸಂಜೆವರೆಗೂ ಬಿಸಿಲಿನಲ್ಲೇ ನಿಲ್ಲಬೇಕಿದೆ. ಬಿಸಿಲಿನಿಂದ ರಕ್ಷಣೆ ಪಡೆಯಲು ಪೆಂಡಾಲ್ ವ್ಯವಸ್ಥೆ ಮಾಡಬೇಕು ಎಂದು ರೈತರು ಆಗ್ರಹಿಸಿದರು.</p>.<p>ಹಾಸನ, ಬೇಲೂರು, ಹಳೇಬೀಡು, ಶ್ರವಣಬೆಳಗೋಳ, ಚನ್ನರಾಯಪಟ್ಟಣ, ಅರಕಲಗೂಡು, ಅರಸೀಕೆರೆ ಸೇರಿದಂತೆ ಹೊರ ಜಿಲ್ಲೆಗಳಿಂದ ರೈತರು ದನಗಳನ್ನು ಜಾತ್ರೆಗೆ ಕರೆ ತರುತ್ತಾರೆ. ನಿತ್ಯ ನೂರಾರು ಜಾನುವಾರುಗಳು ಮಾರಾಟವಾಗುತ್ತವೆ. ಹಿಂದೆ ಉತ್ತಮ ತಳಿಯ ಜಾನುವಾರುಗಳಿಗೆ ಬಹುಮಾನ ನೀಡಲಾಗಿತ್ತು. ಆದರೆ ಈಗ ಬಹುಮಾನ ನೀಡುವುದನ್ನು ನಿಲ್ಲಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.<br /><br />ಅಳವಡಿಸಿರುವ ವಿದ್ಯುತ್ ಕಂಬಗಳು ಜೋರು ಗಾಳಿಗೆ ಕೆಳಗೆ ಬಿದ್ದು, ರೈತರೊಬ್ಬರಿಗೆ ಪೆಟ್ಟಾಗಿದೆ. ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಐದಾರು ಹೊಲಿಗೆ ಹಾಕಲಾಗಿದೆ. ಈ ರೀತಿ ಅವಘಡ ಸಂಭವಿಸಿದರೆ ಅವರನ್ನೇ ನಂಬಿಕೊಂಡಿರುವ ಕುಟುಂಬ ಸದಸ್ಯರಿಗೆ ಯಾರು ದಿಕ್ಕು ಎಂದು ಮುದ್ದಳ್ಳಿ ರೈತ ಜವರೇಗೌಡ ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>