ಚನ್ನರಾಯಪಟ್ಟಣದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಭಾನುವಾರ ಹಾಗೂ ಸೋಮವಾರ
ಮೈಸೂರಿನಲ್ಲೇ ವಾಸ್ತವ್ಯ ಹೂಡುತ್ತಿದ್ದು, ಈ ಬಗ್ಗೆ ಅವರ ಜೊತೆ ಚರ್ಚಿಸಿ ಬಗೆಹರಿಸಲಾಗುವುದು. ಈಚೆಗೆ ನಡೆದ ಕೆಡಿಪಿ
ಸಭೆಯಲ್ಲಿ ತಮ್ಮ ಪತ್ರಗಳಿಗೆ ಜಿಲ್ಲಾಧಿಕಾರಿ ಯಾವುದೇ ಉತ್ತರ ಕೊಡುತ್ತಿಲ್ಲ ಎಂದು ಶಾಸಕ ಮಂಜುನಾಥ್ ಆರೋಪಿಸಿದ್ದರು. ಆದರೆ, ತಮಗೆ ಯಾವುದೇ ಪತ್ರ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಪ್ರತಿಕ್ರಿಯೆ ನೀಡಿದ್ದರು. ಹಾಗಾಗಿ ಮತ್ತೊಮ್ಮೆ ಕುಳಿತು ಚರ್ಚೆ ನಡೆಸಿ, ಸಮಸ್ಯೆ ಬಗೆಹರಿಸಲಾಗುವುದು. ಇದರಲ್ಲಿ ಯಾವುದೇ ಗೊಂದಲ ಬೇಡ’ ಎಂದು ತಿಳಿಸಿದರು.