<p><strong>ಕೊಣನೂರು</strong>: ಸಾಲದ ಹೊರೆಯಿಂದ ವಿಷಕುಡಿದು ಆತ್ಮಹತ್ಯೆ ಮಾಡಿಕೊಂಡ ರೈತ ಮಂಜೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಸಾಂತ್ವನ ಹೇಳಿದರು.</p>.<p>ರಾಮನಾಥಪುರ ಹೋಬಳಿಯ ಮಲ್ಲಾಪುರದ ಮಂಜೇಗೌಡ ಗುರುವಾರ ರಾತ್ರಿ ವಿಷಕುಡಿದು ಚಿಕಿತ್ಸೆಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಮೃತಪಟ್ಟಿದ್ದರು.</p>.<p>ಬ್ಯಾಂಕ್ನಲ್ಲಿ ₹5 ಲಕ್ಷ ಸಾಲ ಪಡೆದಿದ್ದು, ಶುಂಠಿ ಬೆಳೆಯಲ್ಲಿ ಆದಾಯ ಬಾರದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಿಗೆ ಇಬ್ಬರು ಪುತ್ರಿಯರು, ಪತ್ನಿ ಮತ್ತು ಪುತ್ರ ಇದ್ದಾರೆ.</p>.<p>ಜಿಲ್ಲಾಧಿಕಾರಿ ಲತಾಕುಮಾರಿ ಮಾತನಾಡಿ, ‘ಮೃತರ ಕುಟುಂಬದವರಿಗೆ ₹5 ಲಕ್ಷ ಪರಿಹಾರವನ್ನು ಒಂದು ವಾರದೊಳಗೆ ಹಾಗೂ ರೈತ ಆತ್ಮಹತ್ಯೆಯ ಪಿಂಚಣಿ ಯೋಜನೆ ಮಾಸಿಕ ₹2 ಸಾವಿರ, ರಾಷ್ಟ್ರೀಯ ಕುಟುಂಬ ನೆರವು ಯೋಜನೆಯ ಪರಿಹಾರಗಳನ್ನು ನಾಳೆಯೊಳಗೆ ವಿತರಿಸಿ’ ಎಂದು ತಹಶೀಲ್ದಾರ್ ಕೆ.ಸಿ.ಸೌಮ್ಯ ಅವರಿಗೆ ಸೂಚಿಸಿದರು. </p>.<p>ರಾಷ್ಟ್ರೀಯ ಪ್ರಕೃತಿ ವಿಕೋಪ ಯೋಜನೆಯಡಿ ಮನೆ ಹಾಗೂ ಪಶು ಇಲಾಖೆಯಿಂದ ಪಶುಭಾಗ್ಯ ಹಾಗೂ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ನೀಡಬೇಕು’ ಎಂದು ಸೂಚಿಸಿದರು.</p>.<p>ಸಕಲೇಶಪುರ ಉಪ ವಿಭಾಗಾಧಿಕಾರಿ ಶ್ರುತಿ ಮಾತನಾಡಿ, ‘ಮೃತರ ಕುಟುಂಬಕ್ಕೆ ಸರ್ಕಾರದ ಸವಲತ್ತು ಕೊಡಿಸಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು. ಪರಿಹಾರವನ್ನು ತುರ್ತಾಗಿ ನೀಡಲಾಗುವುದು ಎಂದು ತಿಳಿಸಿದರು.</p>.<p>ಗ್ರೇಡ್ 2 ತಹಶೀಲ್ದಾರ್ ಸಿ. ಸ್ವಾಮಿ, ಕಂದಾಯ ನಿರೀಕ್ಷಕ ಭಾಸ್ಕರ್, ಗ್ರಾಮ ಆಡಳಿತ ಅಧಿಕಾರಿ ಪ್ರದೀಪ್ ಕಾಂಬಳೆ, ಕಿರಣ್, ಮಧು ಕುಮಾರ್, ತಾಲ್ಲೂಕು ಕಚೇರಿಯ ವಿಷಯ ನಿರ್ವಾಹಕ ಉಜ್ವಲ್ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಣನೂರು</strong>: ಸಾಲದ ಹೊರೆಯಿಂದ ವಿಷಕುಡಿದು ಆತ್ಮಹತ್ಯೆ ಮಾಡಿಕೊಂಡ ರೈತ ಮಂಜೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಸಾಂತ್ವನ ಹೇಳಿದರು.</p>.<p>ರಾಮನಾಥಪುರ ಹೋಬಳಿಯ ಮಲ್ಲಾಪುರದ ಮಂಜೇಗೌಡ ಗುರುವಾರ ರಾತ್ರಿ ವಿಷಕುಡಿದು ಚಿಕಿತ್ಸೆಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಮೃತಪಟ್ಟಿದ್ದರು.</p>.<p>ಬ್ಯಾಂಕ್ನಲ್ಲಿ ₹5 ಲಕ್ಷ ಸಾಲ ಪಡೆದಿದ್ದು, ಶುಂಠಿ ಬೆಳೆಯಲ್ಲಿ ಆದಾಯ ಬಾರದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಿಗೆ ಇಬ್ಬರು ಪುತ್ರಿಯರು, ಪತ್ನಿ ಮತ್ತು ಪುತ್ರ ಇದ್ದಾರೆ.</p>.<p>ಜಿಲ್ಲಾಧಿಕಾರಿ ಲತಾಕುಮಾರಿ ಮಾತನಾಡಿ, ‘ಮೃತರ ಕುಟುಂಬದವರಿಗೆ ₹5 ಲಕ್ಷ ಪರಿಹಾರವನ್ನು ಒಂದು ವಾರದೊಳಗೆ ಹಾಗೂ ರೈತ ಆತ್ಮಹತ್ಯೆಯ ಪಿಂಚಣಿ ಯೋಜನೆ ಮಾಸಿಕ ₹2 ಸಾವಿರ, ರಾಷ್ಟ್ರೀಯ ಕುಟುಂಬ ನೆರವು ಯೋಜನೆಯ ಪರಿಹಾರಗಳನ್ನು ನಾಳೆಯೊಳಗೆ ವಿತರಿಸಿ’ ಎಂದು ತಹಶೀಲ್ದಾರ್ ಕೆ.ಸಿ.ಸೌಮ್ಯ ಅವರಿಗೆ ಸೂಚಿಸಿದರು. </p>.<p>ರಾಷ್ಟ್ರೀಯ ಪ್ರಕೃತಿ ವಿಕೋಪ ಯೋಜನೆಯಡಿ ಮನೆ ಹಾಗೂ ಪಶು ಇಲಾಖೆಯಿಂದ ಪಶುಭಾಗ್ಯ ಹಾಗೂ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ನೀಡಬೇಕು’ ಎಂದು ಸೂಚಿಸಿದರು.</p>.<p>ಸಕಲೇಶಪುರ ಉಪ ವಿಭಾಗಾಧಿಕಾರಿ ಶ್ರುತಿ ಮಾತನಾಡಿ, ‘ಮೃತರ ಕುಟುಂಬಕ್ಕೆ ಸರ್ಕಾರದ ಸವಲತ್ತು ಕೊಡಿಸಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು. ಪರಿಹಾರವನ್ನು ತುರ್ತಾಗಿ ನೀಡಲಾಗುವುದು ಎಂದು ತಿಳಿಸಿದರು.</p>.<p>ಗ್ರೇಡ್ 2 ತಹಶೀಲ್ದಾರ್ ಸಿ. ಸ್ವಾಮಿ, ಕಂದಾಯ ನಿರೀಕ್ಷಕ ಭಾಸ್ಕರ್, ಗ್ರಾಮ ಆಡಳಿತ ಅಧಿಕಾರಿ ಪ್ರದೀಪ್ ಕಾಂಬಳೆ, ಕಿರಣ್, ಮಧು ಕುಮಾರ್, ತಾಲ್ಲೂಕು ಕಚೇರಿಯ ವಿಷಯ ನಿರ್ವಾಹಕ ಉಜ್ವಲ್ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>