ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದುತ್ವಕ್ಕಾಗಿ‌ ಜೀವನ ಮುಡಿಪಿಟ್ಟರೂ ನನ್ನ ತೇಜೋವಧೆ- ಸತ್ಯಜಿತ್ ಸುರತ್ಕಲ್

Last Updated 9 ಮೇ 2018, 11:06 IST
ಅಕ್ಷರ ಗಾತ್ರ

ಮಂಗಳೂರು: 'ಹಿಂದುತ್ವಕ್ಕಾಗಿ ಇಡೀ ಜೀವನ ಮುಡಿಪಾಗಿಟ್ಟ ನನ್ನ ತೇಜೋವಧೆ ಮಾಡುವ ಪ್ರಯತ್ನವನ್ನು ಕೆಲವು ಸ್ಥಾಪಿತ ಹಿತಾಸಕ್ತಿಗಳು ಮಾಡುತ್ತಿವೆ' ಎಂದು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸತ್ಯಜಿತ್‌ ಸುರತ್ಕಲ್ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಹನ್ನೊಂದನೆಯ ವಯಸ್ಸಿನಲ್ಲಿ ನಾನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿದೆ. ಅಂದಿನಿಂದ ಇಂದಿನವರೆಗೂ ಸಂಘದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿಯುತ್ತಿದ್ದೇನೆ. ಸಂಘವೇ ನನ್ನ ಕುಟುಂಬ ಎಂಬ ನಂಬಿಕೆಯಲ್ಲಿ ದುಡಿಯುತ್ತಿದ್ದೇನೆ. ಈಗ ನನ್ನ ವಿರುದ್ಧ ಹಣ ಮಾಡಿರುವ ಆರೋಪ ಮಾಡಲಾಗುತ್ತಿದೆ' ಎಂದು ಕಣ್ಣೀರು ಹಾಕಿದರು.

ಸಂಘಟನೆ ಕೆಲಸಕ್ಕಾಗಿ ಯಾರ ಬಳಿಯೂ ಹಣ ಪಡೆದಿಲ್ಲ. ಸ್ವಂತ ಹಣ ವ್ಯಯ ಮಾಡಿದೆ. ಸಾಲ ಮಾಡಿ‌ ಕಟ್ಟಿದ ಮನೆ ಮತ್ತು ಐದೂವರೆ ಸೆಂಟ್ಸ್ ಜಮೀನು ಬಿಟ್ಟರೆ ₹ 85 ಲಕ್ಷ ಸಾಲವೇ ಕುಟುಂಬದ ಆಸ್ತಿ. ತಂದೆ, ತಾಯಿಗೆ ಸುಖ ನೀಡಲಿಲ್ಲ. ಹೆಂಡತಿ, ಮಕ್ಕಳಿಗೆ ನ್ಯಾಯ ಒದಗಿಸಲಿಲ್ಲ ಎಂದರು.

ಎಂಆರ್‌ಪಿಎಲ್, ಎಸ್ಇಜೆಡ್ ಸೇರಿದಂತೆ ಕೆಲವು ಕಡೆ ಕಮಿಷನ್ ಪಡೆದಿರುವುದಾಗಿ ಆರೋಪ ಮಾಡಿದ್ದಾರೆ. ಸುರತ್ಕಲ್ ಟೋಲ್ ವಿಚಾರದಲ್ಲೂ ಹಣ ಪಡೆದಿರುವ ಆರೋಪ ಮಾಡುತ್ತಿದ್ದಾರೆ. ಅಂತಹವರು ಯಾವುದೇ ಸ್ಥಳಕ್ಕೆ ಬಂದರೂ ಪ್ರಮಾಣ ಮಾಡಲು ಸಿದ್ಧ ಎಂದು ಸವಾಲು ಹಾಕಿದರು.

ಚುನಾವಣೆಯಲ್ಲಿ ಯಾಕೆ ಟಿಕೆಟ್ ನೀಡಿಲ್ಲ ಎಂಬುದು ಇನ್ನೂ ತಿಳಿದಿಲ್ಲ. ಈ ಚುನಾವಣೆಯಲ್ಲಿ ತಮ್ಮದು ತಟಸ್ಥ ನಿಲುವು. ಮೇ 20ರ ಬಳಿಕ ಮುಂದಿನ ನಿರ್ಧಾರ ಪ್ರಕಟಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT