<p><strong>ಹಾಸನ:</strong> ಮತದಾರರ ಮನೆಗಳಿಗೆ ಭೇಟಿ ನೀಡಿ ಮರಣ ಪ್ರಕರಣಗಳನ್ನು ಪರಿಗಣಿಸಿ ಕೇಂದ್ರ ಚುನಾವಣಾ<br />ಆಯೋಗಕ್ಕೆ ವರದಿ ಸಲ್ಲಿಸುವಂತೆ ಮತಗಟ್ಟೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ತಹಶೀಲ್ದಾರರೊಂದಿಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಮೇಲ್ವಿಚಾರಕರು ಬಿಎಲ್ಓಗಳು ಮಾಡಿದ ಕೆಲಸಗಳನ್ನು ಪರಿಶೀಲಿಸಿ, ಯಾವುದೇ ಲೋಪ ದೋಷಗಳು ಕಂಡು ಬರದಂತೆ ಎಚ್ಚರವಹಿಸಬೇಕು.ಆಯೋಗಕ್ಕೆ ಯಾವುದೇ ತಪ್ಪುಗಳಿಲ್ಲದ ಮತದಾರರ ಪಟ್ಟಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಮಾತನಾಡಿ, ಹತ್ತಕ್ಕಿಂತ ಹೆಚ್ಚು ಮತದಾರರಿರುವಮನೆಗಳಿಗೆ ಭೇಟಿ ನೀಡಿ, ಲೋಪದೋಷಗಳು ಇಲ್ಲದ ರೀತಿಯಲ್ಲಿ ಪರಿಶೀಲಿಸಿ ವರದಿನೀಡಬೇಕು. ಜಿಲ್ಲಾ ಸಾಂಖ್ಯಿಕ ಇಲಾಖೆಯಿಂದ ಈಗಾಗಲೇ ತಾಲ್ಲೂಕುವಾರು ಮರಣ ಹೊಂದಿರುವವರವಿವರ ನೀಡಲಾಗಿದ್ದು, ಈ ಮಾರ್ಗಸೂಚಿಗಳನ್ವಯ ಸೂಕ್ತ ಕ್ರಮಕೈಗೊಳ್ಳಲುಜಿಲ್ಲೆಯ ಎಲ್ಲಾ ಸಹಾಯಕ ನೋಂದಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.<br /><br />ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುನೀತ್ ಕುಮಾರ್, ಉಪವಿಭಾಗಾಧಿಕಾರಿಗಳಾದ<br />ಬಿ.ಎ.ಜಗದೀಶ್, ಪ್ರತೀಕ್ ಬಾಯಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್, ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ, ಆರ್. ಸಿ ಎಚ್.ಅಧಿಕಾರಿ ಡಾ. ಕಾಂತರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಮತದಾರರ ಮನೆಗಳಿಗೆ ಭೇಟಿ ನೀಡಿ ಮರಣ ಪ್ರಕರಣಗಳನ್ನು ಪರಿಗಣಿಸಿ ಕೇಂದ್ರ ಚುನಾವಣಾ<br />ಆಯೋಗಕ್ಕೆ ವರದಿ ಸಲ್ಲಿಸುವಂತೆ ಮತಗಟ್ಟೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ತಹಶೀಲ್ದಾರರೊಂದಿಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಮೇಲ್ವಿಚಾರಕರು ಬಿಎಲ್ಓಗಳು ಮಾಡಿದ ಕೆಲಸಗಳನ್ನು ಪರಿಶೀಲಿಸಿ, ಯಾವುದೇ ಲೋಪ ದೋಷಗಳು ಕಂಡು ಬರದಂತೆ ಎಚ್ಚರವಹಿಸಬೇಕು.ಆಯೋಗಕ್ಕೆ ಯಾವುದೇ ತಪ್ಪುಗಳಿಲ್ಲದ ಮತದಾರರ ಪಟ್ಟಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಮಾತನಾಡಿ, ಹತ್ತಕ್ಕಿಂತ ಹೆಚ್ಚು ಮತದಾರರಿರುವಮನೆಗಳಿಗೆ ಭೇಟಿ ನೀಡಿ, ಲೋಪದೋಷಗಳು ಇಲ್ಲದ ರೀತಿಯಲ್ಲಿ ಪರಿಶೀಲಿಸಿ ವರದಿನೀಡಬೇಕು. ಜಿಲ್ಲಾ ಸಾಂಖ್ಯಿಕ ಇಲಾಖೆಯಿಂದ ಈಗಾಗಲೇ ತಾಲ್ಲೂಕುವಾರು ಮರಣ ಹೊಂದಿರುವವರವಿವರ ನೀಡಲಾಗಿದ್ದು, ಈ ಮಾರ್ಗಸೂಚಿಗಳನ್ವಯ ಸೂಕ್ತ ಕ್ರಮಕೈಗೊಳ್ಳಲುಜಿಲ್ಲೆಯ ಎಲ್ಲಾ ಸಹಾಯಕ ನೋಂದಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.<br /><br />ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುನೀತ್ ಕುಮಾರ್, ಉಪವಿಭಾಗಾಧಿಕಾರಿಗಳಾದ<br />ಬಿ.ಎ.ಜಗದೀಶ್, ಪ್ರತೀಕ್ ಬಾಯಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್, ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ, ಆರ್. ಸಿ ಎಚ್.ಅಧಿಕಾರಿ ಡಾ. ಕಾಂತರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>