ಇಲ್ಲಿಯ ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರು, ಶುಶ್ರೂಷಕರು ಹಾಗೂ ಇತರ ಸಮಸ್ಯೆಗಳನ್ನು ಆಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘6 ಮಂದಿ ಜೆಡಿಎಸ್ ಶಾಸಕರು ಇರುವುದರಿಂದ ಹಾಸನ ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಲಾಗುತ್ತಿದೆ. ಚುನಾವಣೆ ಬಂದಾಗ ಹೇಗಾದರೂ ರಾಜಕೀಯ ಮಾಡಿಕೊಳ್ಳಲಿ, ಕೊರೊನಾದಂತ ಜೀವ ಹಂತಕ ಕಾಯಿಲೆ ವಿಷಯದಲ್ಲಿಯೂ ಸಹ ಬಿಜೆಪಿ ಸರ್ಕಾರ ದ್ವೇಷದ ರಾಜಕೀಯ ಮಾಡುವುದು ಸರಿಯಲ್ಲ’ ಎಂದರು.