<p><strong>ಸಕಲೇಶಪುರ: </strong>ಪಟ್ಟಣದ ಸಮೀಪದ ಕೊಲ್ಲಹಳ್ಳಿ ಗ್ರಾಮದಲ್ಲಿ, ಕಾಡಾನೆ ತುಳಿತದಿಂದ ಅರ್ಚಕರೊಬ್ಬರುಮಂಗಳವಾರ ಮೃತಪಟ್ಟಿದ್ದಾರೆ.</p>.<p>ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ ಪೂಜೆ ಮಾಡುತ್ತಿದ್ದ ಅರ್ಚಕ ಆಸ್ತಿಕ ಭಟ್ (52) ಮೃತಪಟ್ಟವರು. ಬೆಳಿಗ್ಗೆ ಐದೂವರೆಗೆ ಮನೆಯಿಂದ ಹೊರಬಂದಾಗ, ಅಂಗಳದಲ್ಲಿ ಇದ್ದ ಆನೆಯು ಅವರನ್ನು ಸೊಂಡಿಲಿನಿಂದ ಎತ್ತಿ ಹಾಕಿ, ತುಳಿದಿದೆ. ಅವರು ಸ್ಥಳದಲ್ಲೇ ಅಸು ನೀಗಿದ್ದಾರೆ.</p>.<p>ಅವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ.</p>.<p>ಶಾಸಕ ಎಚ್.ಕೆ.ಕುಮಾರಸ್ವಾಮಿ, ಜಿಲ್ಲಾಧಿಕಾರಿ ಗಿರೀಶ್, ಜಿಲ್ಲಾ ಪಂಚಾಯಿತಿ ಸಿಇಒ ಪರಮೇಶ್, ಉಪವಿಭಾಗಾಧಿಕಾರಿ ಎಂ. ಗಿರೀಶ್ ನಂದನ್, ತಹಶೀಲ್ದಾರ್ ಮಂಜುನಾಥ್ ಭೇಟಿ ನೀಡಿ ಮೃತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ₹ 2 ಲಕ್ಷ ಪರಿಹಾರದ ಚೆಕ್ ವಿತರಿಸಿದರು. ಉಳಿದ ₹ 5.5 ಲಕ್ಷ ಪರಿಹಾರದ ಹಣ ನೀಡುವುದಾಗಿ ಶಾಸಕರು ಹೇಳಿದರು.</p>.<p>ಕಳೆದ ಒಂದು ತಿಂಗಳಿಂದ ಇದೇ ಗ್ರಾಮದ ಸುತ್ತಮುತ್ತ ಸುಮಾರು 40 ಕಾಡಾನೆಗಳು ಓಡಾಡುತ್ತಿದ್ದು, ಆಸ್ತಿಪಾಸ್ತಿಗೆ ಹಾನಿ ಮಾಡುತ್ತಿದ್ದವು. ಇದೀಗ ಜೀವಹಾನಿಯೂ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ರೈತರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ: </strong>ಪಟ್ಟಣದ ಸಮೀಪದ ಕೊಲ್ಲಹಳ್ಳಿ ಗ್ರಾಮದಲ್ಲಿ, ಕಾಡಾನೆ ತುಳಿತದಿಂದ ಅರ್ಚಕರೊಬ್ಬರುಮಂಗಳವಾರ ಮೃತಪಟ್ಟಿದ್ದಾರೆ.</p>.<p>ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ ಪೂಜೆ ಮಾಡುತ್ತಿದ್ದ ಅರ್ಚಕ ಆಸ್ತಿಕ ಭಟ್ (52) ಮೃತಪಟ್ಟವರು. ಬೆಳಿಗ್ಗೆ ಐದೂವರೆಗೆ ಮನೆಯಿಂದ ಹೊರಬಂದಾಗ, ಅಂಗಳದಲ್ಲಿ ಇದ್ದ ಆನೆಯು ಅವರನ್ನು ಸೊಂಡಿಲಿನಿಂದ ಎತ್ತಿ ಹಾಕಿ, ತುಳಿದಿದೆ. ಅವರು ಸ್ಥಳದಲ್ಲೇ ಅಸು ನೀಗಿದ್ದಾರೆ.</p>.<p>ಅವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ.</p>.<p>ಶಾಸಕ ಎಚ್.ಕೆ.ಕುಮಾರಸ್ವಾಮಿ, ಜಿಲ್ಲಾಧಿಕಾರಿ ಗಿರೀಶ್, ಜಿಲ್ಲಾ ಪಂಚಾಯಿತಿ ಸಿಇಒ ಪರಮೇಶ್, ಉಪವಿಭಾಗಾಧಿಕಾರಿ ಎಂ. ಗಿರೀಶ್ ನಂದನ್, ತಹಶೀಲ್ದಾರ್ ಮಂಜುನಾಥ್ ಭೇಟಿ ನೀಡಿ ಮೃತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ₹ 2 ಲಕ್ಷ ಪರಿಹಾರದ ಚೆಕ್ ವಿತರಿಸಿದರು. ಉಳಿದ ₹ 5.5 ಲಕ್ಷ ಪರಿಹಾರದ ಹಣ ನೀಡುವುದಾಗಿ ಶಾಸಕರು ಹೇಳಿದರು.</p>.<p>ಕಳೆದ ಒಂದು ತಿಂಗಳಿಂದ ಇದೇ ಗ್ರಾಮದ ಸುತ್ತಮುತ್ತ ಸುಮಾರು 40 ಕಾಡಾನೆಗಳು ಓಡಾಡುತ್ತಿದ್ದು, ಆಸ್ತಿಪಾಸ್ತಿಗೆ ಹಾನಿ ಮಾಡುತ್ತಿದ್ದವು. ಇದೀಗ ಜೀವಹಾನಿಯೂ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ರೈತರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>