ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಬೆಂಬಲಿಸಲು ನಿರ್ಧಾರ

ಶಿವಲಿಂಗೇಗೌಡರ ವಿರುದ್ಧ ತಿರುಗಿಬಿದ್ದ ನಗರಸಭೆ ಸದಸ್ಯರು
Last Updated 22 ಜೂನ್ 2021, 18:29 IST
ಅಕ್ಷರ ಗಾತ್ರ

ಹಾಸನ: ಅರಸೀಕರೆ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡರ ವಿರುದ್ಧ ತಿರುಗಿ ಬಿದ್ದಿರುವ ಜೆಡಿಎಸ್ ನ ಏಳು ಮಂದಿ ನಗರಸಭೆ ಸದಸ್ಯರು ಬಿಜೆಪಿಗೆ ಬೆಂಬಲ ನೀಡಲು ನಿರ್ಧರಿಸಿದ್ದಾರೆ.

ಅರಸೀಕೆರೆ ನಗರಸಭೆಯಲ್ಲಿ ತಮಗೆ ಪ್ರತ್ಯೇಕ ಆಸನ ಮೀಸಲಿಡುವಂತೆ ಕೋರಿ ಏಳು ಮಂದಿಜೆಡಿಎಸ್‌ ಸದಸ್ಯರು ಹಾಗೂ ಇಬ್ಬರು ಪಕ್ಷೇತರ ಸದಸ್ಯರು ಸೋಮವಾರ ಜಿಲ್ಲಾಧಿಕಾರಿಆರ್‌.ಗಿರೀಶ್‌ ಅವರಿಗೆ ಮನವಿ ಸಲ್ಲಿಸಿದರು.

‘ಶಾಸಕ ಶಿವಲಿಂಗೇಗೌಡ ಹಾಗೂ ಸ್ಥಳೀಯ ನಾಯಕರಿಂದ ಉಸಿರುಗಟ್ಟಿಸುವ ವಾತಾವರಣ ಇದೆ. ಆದ್ದರಿಂದ ಬೇಸತ್ತು ಅವರ ಗುಂಪಿನಿಂದ ಹೊರ ಬಂದಿದ್ದೇವೆ.ಜೆಡಿಎಸ್‌ಪಕ್ಷ ತೊರೆದಿಲ್ಲ. ಆದರೆ,ಮೂರನೇ ಒಂದು ಭಾಗ ಗುಂಪಾಗಿ ಪ್ರತ್ಯೇಕವಾಗಿದ್ದೇವೆ. ನಗರದ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಅಧ್ಯಕ್ಷರಿಗೆ ಬೆಂಬಲ ನೀಡುತ್ತೇವೆ’ ಎಂದು ಸದಸ್ಯರು ಘೋಷಿಸಿದರು.

31 ಸದಸ್ಯ ಬಲದ ಅರಸೀಕೆರೆ ನಗರಸಭೆಯಲ್ಲಿ 21 ಜೆಡಿಎಸ್, 6 ಬಿಜೆಪಿ, 3 ಪಕ್ಷೇತರರು ಹಾಗೂ 1 ಕಾಂಗ್ರೆಸ್ ಸದಸ್ಯ ಇದ್ದಾರೆ. ಆದರೆ, ಮೀಸಲಾತಿ ಆಧಾರದ ಮೇಲೆ ಅಧ್ಯಕ್ಷ ಸ್ಥಾನ ಬಿಜೆಪಿಪಾಲಾಗಿದೆ. ಕೋರಂ ಕೊರತೆ ನೀಗಿಸಲು ಬಿಜೆಪಿ ನಾಯಕರು ಆಪರೇಷನ್ ಕಮಲ ನಡೆಸಿದ ಪರಿಣಾಮ7 ಜನ ಸದಸ್ಯರು ಜೆಡಿಎಸ್ ನಿಂದ ಪ್ರತ್ಯೇಕವಾಗಿ ಬಂದು ಬಿಜೆಪಿಗೆ ಬೆಂಬಲ ನೀಡಲು ಮುಂದಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT