ಹಾಥರಸ್ ಅತ್ಯಾಚಾರ ಪ್ರಕರಣ ಖಂಡಿಸಿ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಮೊದಲಿನಿಂದಲೂ
ಪೊಲೀಸರು ಸ್ವತಂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಬಿಜೆಪಿ ಆಡಳಿತ ರಾಜ್ಯಗಳಲ್ಲಿ ದೌರ್ಜನ್ಯ ಹೆಚ್ಚು
ನಡೆಯುತ್ತಿದೆ. ಈ ಘಟನೆಯ ಜವಾಬ್ದಾರಿ ಹೊತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ
ನೀಡಬೇಕು. ಕೂಡಲೇ ಉತ್ತರ ಪ್ರದೇಶ ಸರ್ಕಾರವನ್ನು ಪ್ರಧಾನಿ ನರೇಂದ್ರ ಮೋದಿ ವಜಾ ಮಾಡಬೇಕು ಎಂದು
ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಮೋದಿ ಅವರು ಬೇಟಿ ಬಚಾವೋ ಬೇಟಿ ಪಡಾವೋ ಎನ್ನುತ್ತಾರೆ. ಆದರೆ, ದೇಶದಲ್ಲಿ ಆಡಳಿತ ಯಂತ್ರ ಮಹಿಳೆಯ
ಹಿತಕಾಯುವಲ್ಲಿ ಸಂಪೂರ್ಣ ವಿಫಲವಾಗಿದೆ. ಅನ್ಯಾಯಕ್ಕೊಳಗಾದ ಯುವತಿಯೇ ಸಾಯುವ ಮುನ್ನ ನ್ಯಾಯ
ಕೇಳಿದ್ದಾಳೆ. ನಿರ್ಬಯಾ ಪ್ರಕರಣದಂತೆ ಅಪಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದರು.