<p><strong>ಹಾಸನ: </strong>ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸಿಪಿಎಂ ವತಿಯಿಂದ ಶುಕ್ರವಾರ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.</p>.<p>ಒಂದೂವರೆ ವರ್ಷದಿಂದ ದೇಶದ ಜನತೆ ಕೋವಿಡ್ನಿಂದಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಸಮಸ್ಯೆನಿವಾರಣೆಗೆ ಕ್ರಮ ವಹಿಸುವ ಬದಲು ಕೇಂದ್ರ ಸರ್ಕಾರ ಬೆಲೆ ಏರಿಕೆಯ ಹೊರೆ ಹೇರಿದೆ ಎಂದುಪ್ರತಿಭಟನಕಾರರು ಆರೋಪಿಸಿದರು.</p>.<p>ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್ ಮಾತನಾಡಿ, ಒಂದು ವರ್ಷದ ಅವಧಿಯಲ್ಲಿ ಪೆಟ್ರೋಲ್ಬೆಲೆ ₹25 ಹೆಚ್ಚಳಗೊಂಡಿದೆ. ಒಂದು ತಿಂಗಳಲ್ಲಿ 16 ಬಾರಿ ಬೆಲೆ ಏರಿಸಲಾಗಿದೆ. ಲೀಟರ್ಪೆಟ್ರೋಲ್ ದರ ₹ 100 ದಾಟಿದೆ. ಜನ ಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಹೇಳಿದರು.</p>.<p>ಇಂಧನ ಬೆಲೆ ಹೆಚ್ಚಳದಿಂದಾಗಿ ಅಗತ್ಯ ವಸ್ತುಗಳ ಬೆಲೆ ಸಹ ಏರಿಕೆ ಆಗಿದೆ. ಜಾಗತಿಕವಾಗಿ ಕಚ್ಛಾತೈಲದಲ್ಲಿ ಯಾವುದೇ ಬೆಲೆ ಏರಿಕೆ ಆಗದಿದ್ದರೂ ದೇಶದಲ್ಲಿ ಈ ಪ್ರಮಾಣದಲ್ಲಿ ದರ ಹೆಚ್ಚಲು ಕೇಂದ್ರಸರ್ಕಾರವೇ ನೇರ ಹೊಣೆ. ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದುಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಸಿಪಿಎಂ ಸ್ಥಳೀಯ ಸಮಿತಿ ಕಾರ್ಯದರ್ಶಿ ಎಚ್.ಆರ್.ನವೀನ್ ಕುಮಾರ್,ಮುಖಂಡರಾದ ವಸಂತ್ ಕುಮಾರ, ಎಂ.ಜಿ. ಪೃಥ್ವಿ, ಎಂ.ಬಿ.ಪುಷ್ಪ, ಬಾನುಗೊಂದಿ ಲಿಂಗರಾಜುಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸಿಪಿಎಂ ವತಿಯಿಂದ ಶುಕ್ರವಾರ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.</p>.<p>ಒಂದೂವರೆ ವರ್ಷದಿಂದ ದೇಶದ ಜನತೆ ಕೋವಿಡ್ನಿಂದಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಸಮಸ್ಯೆನಿವಾರಣೆಗೆ ಕ್ರಮ ವಹಿಸುವ ಬದಲು ಕೇಂದ್ರ ಸರ್ಕಾರ ಬೆಲೆ ಏರಿಕೆಯ ಹೊರೆ ಹೇರಿದೆ ಎಂದುಪ್ರತಿಭಟನಕಾರರು ಆರೋಪಿಸಿದರು.</p>.<p>ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್ ಮಾತನಾಡಿ, ಒಂದು ವರ್ಷದ ಅವಧಿಯಲ್ಲಿ ಪೆಟ್ರೋಲ್ಬೆಲೆ ₹25 ಹೆಚ್ಚಳಗೊಂಡಿದೆ. ಒಂದು ತಿಂಗಳಲ್ಲಿ 16 ಬಾರಿ ಬೆಲೆ ಏರಿಸಲಾಗಿದೆ. ಲೀಟರ್ಪೆಟ್ರೋಲ್ ದರ ₹ 100 ದಾಟಿದೆ. ಜನ ಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಹೇಳಿದರು.</p>.<p>ಇಂಧನ ಬೆಲೆ ಹೆಚ್ಚಳದಿಂದಾಗಿ ಅಗತ್ಯ ವಸ್ತುಗಳ ಬೆಲೆ ಸಹ ಏರಿಕೆ ಆಗಿದೆ. ಜಾಗತಿಕವಾಗಿ ಕಚ್ಛಾತೈಲದಲ್ಲಿ ಯಾವುದೇ ಬೆಲೆ ಏರಿಕೆ ಆಗದಿದ್ದರೂ ದೇಶದಲ್ಲಿ ಈ ಪ್ರಮಾಣದಲ್ಲಿ ದರ ಹೆಚ್ಚಲು ಕೇಂದ್ರಸರ್ಕಾರವೇ ನೇರ ಹೊಣೆ. ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದುಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಸಿಪಿಎಂ ಸ್ಥಳೀಯ ಸಮಿತಿ ಕಾರ್ಯದರ್ಶಿ ಎಚ್.ಆರ್.ನವೀನ್ ಕುಮಾರ್,ಮುಖಂಡರಾದ ವಸಂತ್ ಕುಮಾರ, ಎಂ.ಜಿ. ಪೃಥ್ವಿ, ಎಂ.ಬಿ.ಪುಷ್ಪ, ಬಾನುಗೊಂದಿ ಲಿಂಗರಾಜುಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>