ಸಕಲೇಶಪುರ: ‘ಅರ್ಜುನ ಆನೆ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಹೆಸರಿನಲ್ಲಿ ಕಾನೂನು ಬಾಹಿರವಾಗಿ ವ್ಯಕ್ತಿಯೊಬ್ಬ ಹಣ ವಸೂಲಿ ಮಾಡುತ್ತಿದ್ದು, ಆತನ ವಿರುದ್ಧ ಅರಣ್ಯ ಹಾಗೂ ಪೊಲೀಸ್ ಇಲಾಖೆ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮಲೆನಾಡು ರಕ್ಷಣಾ ಸೇನೆ ರಾಜ್ಯಾಧ್ಯಕ್ಷ ಸಾಗರ್ ಜಾನೇಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.