<p><strong>ಹಾಸನ:</strong> ನಿವೃತ್ತಿ ಹೊಂದಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ 2011- 12 ರಿಂದ ಗ್ರಾಚ್ಯುಟಿ (ನಿವೃತ್ತಿ ಉಪಧನ) ಜಾರಿಗೊಳಿಸಲು ಒತ್ತಾಯಿಸಿ ಎಐಟಿಯುಸಿ ನೇತೃತ್ವದಲ್ಲಿ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಶನಿವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಈ ವೇಳೆ ಮಾತನಾಡಿದ ಎಐಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷೆ ಜಯಲಕ್ಷ್ಮಿ, ಐವತ್ತು ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಾಗಿ ಕೆಲಸ ಮಾಡಿದ್ದು, ಇದೀಗ ನಿವೃತ್ತಿ ಹೊಂದಿದ್ದೇವೆ. ಆದರೆ ಸರ್ಕಾರದಿಂದ ಪಿಂಚಣಿ, ಗ್ರಾಚ್ಯುಟಿ ಬಿಡುಗಡೆ ಮಾಡದೇ ಬಹುತೇಕ ಕಾರ್ಯಕರ್ತೆಯರು ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗಿದ್ದೇವೆ ತಿಳಿಸಿದರು.</p>.<p>ಬಹುತೇಕರು ನಿವೃತ್ತಿ ನಂತರ ಹಣದ ಮುಗ್ಗಟ್ಟಿನಿಂದ ಭಿಕ್ಷೆ ಬೇಡುವ ಪರಿಸ್ಥಿತಿಗೆ ಬಂದಿದ್ದಾರೆ. ರಕ್ತದೊತ್ತಡ, ಮಧುಮೇಹ, ಹೃದಯ ಕಾಯಿಲೆ ಸೇರಿದಂತೆ ನಾನಾ ಸಮಸ್ಯೆ ಎದುರಿಸುತ್ತಿದ್ದು. ಸರ್ಕಾರ ಈಗಲಾದರೂ ನಮ್ಮ ಮನವಿಗೆ ಸ್ಪಂದಿಸಲಿ ಎಂದು ಆಗ್ರಹಿಸಿದರು.</p>.<p>ನಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಹಲವು ಬಾರಿ ಪ್ರತಿಭಟನೆ ಮಾಡಿದರೂ ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ಸುಪ್ರೀಂ ಕೋರ್ಟ್ ಸಹ ಐದು ವರ್ಷ ಕರ್ತವ್ಯ ನಿರ್ವಹಿಸಿದವರಿಗೆ ಗ್ರಾಚ್ಯುಟಿ ನೀಡಬೇಕು ಎಂದು ಆದೇಶಿಸಿದೆ. ಈ ಆದೇಶವನ್ನು ಪರಿಗಣಿಸದೇ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ. ನಮ್ಮ ಹೋರಾಟಕ್ಕೆ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಹೋರಾಟವಾಗಿ ಜೂನ್ 4ರಂದು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಿದ್ದೇವೆ ಎಂದು ಎಚ್ಚರಿಸಿದರು.</p>.<p>ಎಐಟಿಯುಸಿ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಎಂ.ಸಿ. ಡೋಂಗ್ರೆ, ಕಾರ್ಯಾಧ್ಯಕ್ಷೆ ಲೀಲಾ ಡಯಾಸ್, ಪ್ರಧಾನ ಕಾರ್ಯದರ್ಶಿ ವೇದಾವತಿ, ಖಜಾಂಚಿ ಪಿ.ಡಿ. ನಾಗರತ್ನಾ, ಪುಷ್ಪಾ, ಮಂಜಮ್ಮ, ಸಾವಿತ್ರಮ್ಮ, ಅನ್ನಪೂರ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ನಿವೃತ್ತಿ ಹೊಂದಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ 2011- 12 ರಿಂದ ಗ್ರಾಚ್ಯುಟಿ (ನಿವೃತ್ತಿ ಉಪಧನ) ಜಾರಿಗೊಳಿಸಲು ಒತ್ತಾಯಿಸಿ ಎಐಟಿಯುಸಿ ನೇತೃತ್ವದಲ್ಲಿ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಶನಿವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಈ ವೇಳೆ ಮಾತನಾಡಿದ ಎಐಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷೆ ಜಯಲಕ್ಷ್ಮಿ, ಐವತ್ತು ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಾಗಿ ಕೆಲಸ ಮಾಡಿದ್ದು, ಇದೀಗ ನಿವೃತ್ತಿ ಹೊಂದಿದ್ದೇವೆ. ಆದರೆ ಸರ್ಕಾರದಿಂದ ಪಿಂಚಣಿ, ಗ್ರಾಚ್ಯುಟಿ ಬಿಡುಗಡೆ ಮಾಡದೇ ಬಹುತೇಕ ಕಾರ್ಯಕರ್ತೆಯರು ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗಿದ್ದೇವೆ ತಿಳಿಸಿದರು.</p>.<p>ಬಹುತೇಕರು ನಿವೃತ್ತಿ ನಂತರ ಹಣದ ಮುಗ್ಗಟ್ಟಿನಿಂದ ಭಿಕ್ಷೆ ಬೇಡುವ ಪರಿಸ್ಥಿತಿಗೆ ಬಂದಿದ್ದಾರೆ. ರಕ್ತದೊತ್ತಡ, ಮಧುಮೇಹ, ಹೃದಯ ಕಾಯಿಲೆ ಸೇರಿದಂತೆ ನಾನಾ ಸಮಸ್ಯೆ ಎದುರಿಸುತ್ತಿದ್ದು. ಸರ್ಕಾರ ಈಗಲಾದರೂ ನಮ್ಮ ಮನವಿಗೆ ಸ್ಪಂದಿಸಲಿ ಎಂದು ಆಗ್ರಹಿಸಿದರು.</p>.<p>ನಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಹಲವು ಬಾರಿ ಪ್ರತಿಭಟನೆ ಮಾಡಿದರೂ ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ಸುಪ್ರೀಂ ಕೋರ್ಟ್ ಸಹ ಐದು ವರ್ಷ ಕರ್ತವ್ಯ ನಿರ್ವಹಿಸಿದವರಿಗೆ ಗ್ರಾಚ್ಯುಟಿ ನೀಡಬೇಕು ಎಂದು ಆದೇಶಿಸಿದೆ. ಈ ಆದೇಶವನ್ನು ಪರಿಗಣಿಸದೇ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ. ನಮ್ಮ ಹೋರಾಟಕ್ಕೆ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಹೋರಾಟವಾಗಿ ಜೂನ್ 4ರಂದು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಿದ್ದೇವೆ ಎಂದು ಎಚ್ಚರಿಸಿದರು.</p>.<p>ಎಐಟಿಯುಸಿ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಎಂ.ಸಿ. ಡೋಂಗ್ರೆ, ಕಾರ್ಯಾಧ್ಯಕ್ಷೆ ಲೀಲಾ ಡಯಾಸ್, ಪ್ರಧಾನ ಕಾರ್ಯದರ್ಶಿ ವೇದಾವತಿ, ಖಜಾಂಚಿ ಪಿ.ಡಿ. ನಾಗರತ್ನಾ, ಪುಷ್ಪಾ, ಮಂಜಮ್ಮ, ಸಾವಿತ್ರಮ್ಮ, ಅನ್ನಪೂರ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>