<p><strong>ಹಾಸನ: </strong>ಉತ್ತರ ಪ್ರದೇಶದ ಹಾಥರಸ್ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದುಆಗ್ರಹಿಸಿ ಭೀಮ್ ಆರ್ಮಿ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ<br />ನಡೆಸಲಾಯಿತು.</p>.<p>ನಾಲ್ವರು ಕಿಡಿಗೇಡಿಗಳು ಅತ್ಯಾಚಾರ ನಡೆಸಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಕೃತ್ಯ ನಾಗರಿಕ ಸಮಾಜ<br />ತಲೆ ತಗ್ಗಿಸುವಂತಹದ್ದು. ಯುವತಿ ಕುಟುಂಬದವರಿಗೆ ವಿಷಯ ತಿಳಿಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.<br />ಕರ್ತವ್ಯಲೋಪವೆಸಗಿದ ಪೊಲೀಸರನ್ನು ಅಮಾನತೊಗೊಳಿಸಬೇಕು ಹಾಗೂ ಸರ್ಕಾರ ವಿರುದ್ಧ ಕ್ರಮ<br />ಕೈಗೊಳ್ಭೇಕು ಎಂದು ಆಗ್ರಹಿಸಿದರು.</p>.<p>ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕು. ಮಹಿಳೆಯರು, ಯುವತಿಯರಿಗೆ ರಕ್ಷಣೆ ಒದಗಿಸಬೇಕು. ಸಂತ್ರಸ್ತೆ ಕುಟುಂಬಕ್ಕೆ ಸೂಕ್ತ ಪರಿಹಾರದ ಜೊತೆಗೆ ನ್ಯಾಯ ಒದಗಿಸಬೇಕು. ಸಿಬಿಐ ತನಿಖೆಯಲ್ಲಿ ವಿಳಂಬ ಮಾಡಬಾರದು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.</p>.<p>ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಎಚ್.ಎಸ್. ಪ್ರದೀಪ್, ಪದಾಧಿಕಾರಿಗಳಾದ ರಾಮಚಂದ್ರ, ವಿಜಯ್, ರಾಜೇಶ್,<br />ಚಂದ್ರಶೇಖರ, ವಿಠಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಉತ್ತರ ಪ್ರದೇಶದ ಹಾಥರಸ್ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದುಆಗ್ರಹಿಸಿ ಭೀಮ್ ಆರ್ಮಿ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ<br />ನಡೆಸಲಾಯಿತು.</p>.<p>ನಾಲ್ವರು ಕಿಡಿಗೇಡಿಗಳು ಅತ್ಯಾಚಾರ ನಡೆಸಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಕೃತ್ಯ ನಾಗರಿಕ ಸಮಾಜ<br />ತಲೆ ತಗ್ಗಿಸುವಂತಹದ್ದು. ಯುವತಿ ಕುಟುಂಬದವರಿಗೆ ವಿಷಯ ತಿಳಿಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.<br />ಕರ್ತವ್ಯಲೋಪವೆಸಗಿದ ಪೊಲೀಸರನ್ನು ಅಮಾನತೊಗೊಳಿಸಬೇಕು ಹಾಗೂ ಸರ್ಕಾರ ವಿರುದ್ಧ ಕ್ರಮ<br />ಕೈಗೊಳ್ಭೇಕು ಎಂದು ಆಗ್ರಹಿಸಿದರು.</p>.<p>ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕು. ಮಹಿಳೆಯರು, ಯುವತಿಯರಿಗೆ ರಕ್ಷಣೆ ಒದಗಿಸಬೇಕು. ಸಂತ್ರಸ್ತೆ ಕುಟುಂಬಕ್ಕೆ ಸೂಕ್ತ ಪರಿಹಾರದ ಜೊತೆಗೆ ನ್ಯಾಯ ಒದಗಿಸಬೇಕು. ಸಿಬಿಐ ತನಿಖೆಯಲ್ಲಿ ವಿಳಂಬ ಮಾಡಬಾರದು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.</p>.<p>ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಎಚ್.ಎಸ್. ಪ್ರದೀಪ್, ಪದಾಧಿಕಾರಿಗಳಾದ ರಾಮಚಂದ್ರ, ವಿಜಯ್, ರಾಜೇಶ್,<br />ಚಂದ್ರಶೇಖರ, ವಿಠಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>