<p><strong>ಹಾಸನ:</strong> ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ಶೋಭಾ ದೇವಮಾನೆ ಅವರು ವೈಯಕ್ತಿಕ ದ್ವೇಷದಿಂದ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗಳು ಗುರುವಾರದಿಂದ ಎಬಿವಿಪಿ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭಿಸಿದ್ದಾರೆ.</p>.<p>ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿ ಚನ್ನಯ್ಯ ಹಿರೇಮಠ ಅವರ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ಕಳುಹಿಸುವಾಗ ಸರಿ ಉತ್ತರಗಳನ್ನು ಹೊಡೆದು ಹಾಕಿದ್ದಾರೆ. ಚನ್ನಯ್ಯ ಹಿಂದಿನ ಎರಡು ವರ್ಷ ರ್ಯಾಂಕ್ ಪಡೆದಿದ್ದು, ಈಗ ಅನುತ್ತೀರ್ಣನಾಗಿರುವುದು ಎಲ್ಲರನ್ನೂ ಚಿಂತೆಗೀಡು ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<p>ಉತ್ತರ ಪತ್ರಿಕೆಯ ನಕಲು ಪ್ರತಿ ತರಿಸಿಕೊಂಡು ನೋಡಿದಾಗ ಸರಿ ಉತ್ತರಗಳನ್ನು ಹೊಡೆದು ಹಾಕಿರುವುದು ತಿಳಿದಿದೆ. ಈ ಸಂಬಂಧಪ್ರಾಂಶುಪಾಲರ ವಿರುದ್ಧ ಬಡಾವಣೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದರೂ ಕ್ರಮ ಜರುಗಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ವೈಯಕ್ತಿಕ ದ್ವೇಷದಿಂದ ಪ್ರಾಚಾರ್ಯೆ ವಿದ್ಯಾರ್ಥಿಯ ಜೀವನ ಹಾಳು ಮಾಡಿದ್ದಾರೆ. ಸರ್ಕಾರಿ ಅಧಿಕಾರ ದುರುಪಯೋಗ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಚನ್ನಯ್ಯನ ಉತ್ತರ ಪತ್ರಿಕೆಯನ್ನು ಮರು ಮೌಲ್ಯಮಾಪನ ಮಾಡಿ ಶೀಘ್ರ ಫಲಿತಾಂಶ ಘೋಷಿಸಬೇಕು. ತಪ್ಪಿತಸ್ಥರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಎಬಿವಿಪಿ ಜಿಲ್ಲಾ ಸಂಚಾಲಕ ಬೊಮ್ಮಣ್ಣ, ಐಶ್ವರ್ಯ, ಮಂಜುನಾಥ್, ಚನ್ನಯ್ಯ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ಶೋಭಾ ದೇವಮಾನೆ ಅವರು ವೈಯಕ್ತಿಕ ದ್ವೇಷದಿಂದ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗಳು ಗುರುವಾರದಿಂದ ಎಬಿವಿಪಿ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭಿಸಿದ್ದಾರೆ.</p>.<p>ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿ ಚನ್ನಯ್ಯ ಹಿರೇಮಠ ಅವರ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ಕಳುಹಿಸುವಾಗ ಸರಿ ಉತ್ತರಗಳನ್ನು ಹೊಡೆದು ಹಾಕಿದ್ದಾರೆ. ಚನ್ನಯ್ಯ ಹಿಂದಿನ ಎರಡು ವರ್ಷ ರ್ಯಾಂಕ್ ಪಡೆದಿದ್ದು, ಈಗ ಅನುತ್ತೀರ್ಣನಾಗಿರುವುದು ಎಲ್ಲರನ್ನೂ ಚಿಂತೆಗೀಡು ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<p>ಉತ್ತರ ಪತ್ರಿಕೆಯ ನಕಲು ಪ್ರತಿ ತರಿಸಿಕೊಂಡು ನೋಡಿದಾಗ ಸರಿ ಉತ್ತರಗಳನ್ನು ಹೊಡೆದು ಹಾಕಿರುವುದು ತಿಳಿದಿದೆ. ಈ ಸಂಬಂಧಪ್ರಾಂಶುಪಾಲರ ವಿರುದ್ಧ ಬಡಾವಣೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದರೂ ಕ್ರಮ ಜರುಗಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ವೈಯಕ್ತಿಕ ದ್ವೇಷದಿಂದ ಪ್ರಾಚಾರ್ಯೆ ವಿದ್ಯಾರ್ಥಿಯ ಜೀವನ ಹಾಳು ಮಾಡಿದ್ದಾರೆ. ಸರ್ಕಾರಿ ಅಧಿಕಾರ ದುರುಪಯೋಗ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಚನ್ನಯ್ಯನ ಉತ್ತರ ಪತ್ರಿಕೆಯನ್ನು ಮರು ಮೌಲ್ಯಮಾಪನ ಮಾಡಿ ಶೀಘ್ರ ಫಲಿತಾಂಶ ಘೋಷಿಸಬೇಕು. ತಪ್ಪಿತಸ್ಥರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಎಬಿವಿಪಿ ಜಿಲ್ಲಾ ಸಂಚಾಲಕ ಬೊಮ್ಮಣ್ಣ, ಐಶ್ವರ್ಯ, ಮಂಜುನಾಥ್, ಚನ್ನಯ್ಯ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>