ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ವಿರುದ್ಧ ತನಿಖೆಗೆ ಒತ್ತಾಯ: ಜೆಡಿಎಸ್‌ ಪ್ರತಿಭಟನೆ

ಡಿ.ಸಿ ಕಚೇರಿ ಎದುರು ಜೆಡಿಎಸ್‌ ಪ್ರತಿಭಟನೆ
Last Updated 18 ಮಾರ್ಚ್ 2021, 15:04 IST
ಅಕ್ಷರ ಗಾತ್ರ

ಹಾಸನ: ಕರ್ತವ್ಯಲೋಪ ವೆಸಗಿರುವ ಸಹಕಾರ ಸಂಘಗಳ ಸಹಾಯಕ ಅಭಿವೃದ್ಧಿ ಅಧಿಕಾರಿ ವಿ. ಸುನಿಲ್‌ ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕ ನಾರಾಯಣ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ, ಜಿಲ್ಲೆಯಲ್ಲಿ ಅವರು ನಡೆಸಿರುವ ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಆಗ್ರಹಿಸಿ ಜೆಡಿಎಸ್‌ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಅಧಿಕಾರಿಗಳಾದ ಸುನಿಲ್ ಮತ್ತು ನಾರಾಯಣ್ ಅವರು ಸಹಕಾರ ಸಂಘಗಳ ಕಾನೂನು ಪಾಲನೆ ಮಾಡುತ್ತಿಲ್ಲ. ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಇಬ್ಬರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದರೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ ಎಂದು ಪ್ರತಿಭಟನಕಾರರು ಆರೋಪಿಸಿದರು.

ಹಾಸನ ತಾಲ್ಲೂಕಿನ ಶಂಖ ಡೈರಿ ವಿಚಾರವಾಗಿ ಆಡಳಿತಾಧಿಕಾರಿ ಸುನಿಲ್‌ ಅವರು ರಾತ್ರಿ 7 ಗಂಟೆಗೆ ಬಿಜೆಪಿ ಬೆಂಬಲಿತ ರೌಡಿಗಳನ್ನು ಕರೆದುಕೊಂಡು ಹೋಗಿ ಗ್ರಾಮದ ಅಲ್ಪಸಂಖ್ಯಾತ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ನಾರಾಯಣ್ ಸಹ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇಬ್ಬರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ನಗರಸಭೆ ಸದಸ್ಯ ಗಿರೀಶ್‌ ಚನ್ನವೀರಪ್ಪ, ಎಚ್‌ಡಿಸಿಸಿ ಬ್ಯಾಂಕ್‌ ಸದಸ್ಯ ಬಿದರಕೆರೆ ಜಯರಾಂ, ತಾಲ್ಲೂಕು
ಪಂಚಾಯಿತಿ ಸದಸ್ಯ ನಿಂಗೇಗೌಡ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT