<p><strong>ಹಾಸನ:</strong> ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15 ರಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಭಾನುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಯಿಂದ ಏರ್ಪಡಿಸಲಾಗಿದ್ದ ಬೈಕ್ ರ್ಯಾಲಿಗೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹಸಿರು ನಿಶಾನೆ ತೋರಿದರು.</p>.<p>ಸ್ವತಃ ಬೈಕ್ ಚಲಾಯಿಸುವ ಮೂಲಕ ನಗರದಲ್ಲಿ ಸಂಚರಿಸಿದ ಕೆ.ಎಸ್. ಲತಾಕುಮಾರಿ, ಡೈರಿ ವೃತ್ತದಲ್ಲಿ ತಂಡವನ್ನು ಬೆಂಗಳೂರಿಗೆ ಬೀಳ್ಕೊಟ್ಟರು.</p>.<p>ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬೈಕ್ ಚಾಲಕರಿಗೆ ಅಭಿನಂದನೆ. ಲೈನ್ ಶಿಸ್ತು ಪಾಲನೆ ಮಾಡಿ, ವೇಗ ಮಿತಿಯಲ್ಲಿ ಚಾಲನೆ ಮಾಡುವುದರ ಜೊತೆಗೆ ಸುರಕ್ಷಿತವಾಗಿ ಹಿಂದಿರುಗಿ ಬನ್ನಿ ಎಂದು ಹಾರೈಸಿದರು.</p>.<p>ಪ್ರಾರಂಭದಲ್ಲಿ ಮೌನ ಆಚರಿಸುವ ಮೂಲಕ ಮೊಸಳೆ ಹೊಸಹಳ್ಳಿಯಲ್ಲಿ ಗಣೇಶ ಮೆರವಣಿಗೆಯ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ದೂದ್ಪೀರ್ ಹಾಗೂ ಮತ್ತಿತರರು ಹಾಜರಿದ್ದರು.</p>.<p>ಬೈಕ್ ರ್ಯಾಲಿಯು ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭಗೊಂಡು ಎನ್.ಆರ್. ಸರ್ಕಲ್, ಹೇಮಾವತಿ ಪ್ರತಿಮೆ, ಚರ್ಚ್ ಸರ್ಕಲ್, ಗಂಧದಕೋಠಿ ಸರ್ಕಲ್, ಕಲಾ ಕಾಲೇಜು, ಎಂ.ಜಿ. ರಸ್ತೆಯಲ್ಲಿ ಸಾಗಿ ಡೈರಿ ಸರ್ಕಲ್ಗೆ ಪೂರ್ಣಗೊಂಡಿತು. ಅಲ್ಲಿಂದ ಬೈಕ್ ರ್ಯಾಲಿಯನ್ನು ಬೀಳ್ಕೊಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15 ರಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಭಾನುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಯಿಂದ ಏರ್ಪಡಿಸಲಾಗಿದ್ದ ಬೈಕ್ ರ್ಯಾಲಿಗೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹಸಿರು ನಿಶಾನೆ ತೋರಿದರು.</p>.<p>ಸ್ವತಃ ಬೈಕ್ ಚಲಾಯಿಸುವ ಮೂಲಕ ನಗರದಲ್ಲಿ ಸಂಚರಿಸಿದ ಕೆ.ಎಸ್. ಲತಾಕುಮಾರಿ, ಡೈರಿ ವೃತ್ತದಲ್ಲಿ ತಂಡವನ್ನು ಬೆಂಗಳೂರಿಗೆ ಬೀಳ್ಕೊಟ್ಟರು.</p>.<p>ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬೈಕ್ ಚಾಲಕರಿಗೆ ಅಭಿನಂದನೆ. ಲೈನ್ ಶಿಸ್ತು ಪಾಲನೆ ಮಾಡಿ, ವೇಗ ಮಿತಿಯಲ್ಲಿ ಚಾಲನೆ ಮಾಡುವುದರ ಜೊತೆಗೆ ಸುರಕ್ಷಿತವಾಗಿ ಹಿಂದಿರುಗಿ ಬನ್ನಿ ಎಂದು ಹಾರೈಸಿದರು.</p>.<p>ಪ್ರಾರಂಭದಲ್ಲಿ ಮೌನ ಆಚರಿಸುವ ಮೂಲಕ ಮೊಸಳೆ ಹೊಸಹಳ್ಳಿಯಲ್ಲಿ ಗಣೇಶ ಮೆರವಣಿಗೆಯ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ದೂದ್ಪೀರ್ ಹಾಗೂ ಮತ್ತಿತರರು ಹಾಜರಿದ್ದರು.</p>.<p>ಬೈಕ್ ರ್ಯಾಲಿಯು ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭಗೊಂಡು ಎನ್.ಆರ್. ಸರ್ಕಲ್, ಹೇಮಾವತಿ ಪ್ರತಿಮೆ, ಚರ್ಚ್ ಸರ್ಕಲ್, ಗಂಧದಕೋಠಿ ಸರ್ಕಲ್, ಕಲಾ ಕಾಲೇಜು, ಎಂ.ಜಿ. ರಸ್ತೆಯಲ್ಲಿ ಸಾಗಿ ಡೈರಿ ಸರ್ಕಲ್ಗೆ ಪೂರ್ಣಗೊಂಡಿತು. ಅಲ್ಲಿಂದ ಬೈಕ್ ರ್ಯಾಲಿಯನ್ನು ಬೀಳ್ಕೊಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>