<p><strong>ಹೊಳೆನರಸೀಪುರ</strong>: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಆಸ್ಪತ್ರೆಯ ಎಲ್ಲ ಹಾಸಿಗೆಗಳು ಭರ್ತಿ ಆಗಿವೆ. ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಡೆಂಗಿ ಹೆಚ್ಚಾಗುತ್ತಿದ್ದು, ಎಲ್ಲರೂ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.</p>.<p>ಇತ್ತೀಚೆಗೆ ಹಳ್ಳಿಮೈಸೂರಿನ 8 ವರ್ಷದ ಬಾಲಕಿಯೊಬ್ಬಳಿಗೆ ಪ್ಲೇಟ್ಲೆಟ್ಸ್ ಕಡಿಮೆಯಾಗಿ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ರಕ್ತದೊತ್ತಡ ಕಡಿಮೆ ಆಗಿತ್ತು. ಅಲ್ಲಿಂದ ಹಾಸನದ ಹಿಮ್ಸ್ಗೆ ದಾಖಲಿಸಲಾಗಿತ್ತು. ಅಲ್ಲಿ ಬಾಲಕಿ ಮೃತಪಟ್ಟಿದ್ದಳು.</p>.<p>‘ಡೆಂಗಿ ಪರೀಕ್ಷೆ ಮಾಡಲು ಇಲ್ಲಿನ ಪ್ರಯೋಗಾಲಯದಲ್ಲಿ ಕೆಲವು ದಿನಗಳಿಂದ ಅಗತ್ಯ ಪರಿಕರಗಳು ಇಲ್ಲದಾಗಿವೆ ಎಂದು ಪ್ರಯೋಗಾಲಯದ ಸಿಬ್ಬಂದಿ ಹೇಳುತ್ತಿದ್ದಾರೆ. ಹೊರಗಡೆ ಖಾಸಗಿ ಪ್ರಯೋಗಾಲಯದಲ್ಲಿ ಬಡರೋಗಿಗಳೂ ₹ 600 ರಿಂದ ₹ 800 ಪಾವತಿಸಿ, ರಕ್ತಪರೀಕ್ಷೆ ಮಾಡಿಸಿಕೊಳ್ಳಬೇಕಿದೆ. ಜಿಲ್ಲಾಡಳಿತ ಸೂಕ್ತ ಕ್ರಮ ತೆಗೆದುಕೊಂಡು ಪ್ರಯೋಗಾಲಯಕ್ಕೆ ಬೇಕಾದ ಅಗತ್ಯ ಪರಿಕರಗಳನ್ನು ನೀಡಿ ಬಡರೋಗಿಗಳಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು’ ಎಂದು ಜನರು ಆಗ್ರಹಿಸಿದ್ದಾರೆ.</p>.<p>‘ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಅನಾರೋಗ್ಯದಿಂದ ನರಳುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಯಾವುದೇ ಕ್ರಮ ತೆಗದುಕೊಳ್ಳುತ್ತಿಲ್ಲ’ ಎಂದು ಸಾರ್ವಜನಿಕರು ದೂರಿದ್ದಾರೆ.</p>.<p>ಆರಂಭದಲ್ಲಿ ಜ್ವರ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ತೆಗೆದುಕೊಳ್ಳಲಾಗುತ್ತಿದೆ. ಜ್ವರ ಹೆಚ್ಚಾಗುತ್ತಿದ್ದಂತೆಯೇ ಜನರು ನೇರವಾಗಿ ತಾಲ್ಲೂಕು ಆಸ್ಪತ್ರೆಗೆ ಬರುತ್ತಿದ್ದು, ಪ್ಲೇಟ್ಲೆಟ್ಗಳ ಸಂಖ್ಯೆ ಕಡಿಮೆ ಆದವರನ್ನು ದಾಖಲು ಮಾಡಿಕೊಳ್ಳಲಾಗುತ್ತಿದೆ.</p>.<p>ನಿತ್ಯ ಇಲ್ಲಿಗೆ ಬರುವವರ ಪೈಕಿ ಶೇ 10 ರಷ್ಟು ಜನರು ಆಸ್ಪತ್ರೆಯಲ್ಲಿ ದಾಖಲಾಗುತ್ತಿದ್ದಾರೆ. ರೋಗಿಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.</p>.<p>‘ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬರುವವರು ಮೊದಲು ₹10 ನೀಡಿ ರಶೀದಿ ಪಡೆಯಬೇಕು. ಈ ರಶೀದಿ ಪಡೆದುಕೊಳ್ಳಲು ಹೆಚ್ಚು ಸಮಯ ಸರದಿಯಲ್ಲಿ ನಿಲ್ಲಬೇಕಾದ ಅನಿವಾರ್ಯತೆ ಇದ್ದು, ಹೆಚ್ಚು ಕೌಂಟರ್ಗಳನ್ನು ತೆರೆಯಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><blockquote><strong>ಒಳರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹಾಸಿಗೆಗಳು ಭರ್ತಿ ಆಗಿದ್ದು ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಸಮಸ್ಯೆ ಆಗಲಿದೆ. </strong></blockquote><span class="attribution">-ಡಾ.ಧನಶೇಖರ್ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ</span></div>.<div><blockquote>ರಕ್ತ ಪರೀಕ್ಷೆ ಮಾಡಿಸಿದಾಗ ಬಹುತೇಕ ಎಲ್ಲರಿಗೂ ಪ್ಲೇಟ್ಲೆಟ್ಸ್ ಕಡಿಮೆ ಆಗಿರುವುದು ತಿಳಿಯುತ್ತಿದೆ. ಡೆಂಗಿಗೆ ತುತ್ತಾಗಿದ್ದರೆ ಪ್ಲೇಟ್ಲೆಟ್ಸ್ ಕಡಿಮೆ ಆಗುತ್ತದೆ. </blockquote><span class="attribution">-ಡಾ. ಸೆಲ್ವಕುಮಾರ್ ಸರ್ಕಾರಿ ಆಸ್ಪತ್ರೆಯ ವೈದ್ಯ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ</strong>: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಆಸ್ಪತ್ರೆಯ ಎಲ್ಲ ಹಾಸಿಗೆಗಳು ಭರ್ತಿ ಆಗಿವೆ. ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಡೆಂಗಿ ಹೆಚ್ಚಾಗುತ್ತಿದ್ದು, ಎಲ್ಲರೂ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.</p>.<p>ಇತ್ತೀಚೆಗೆ ಹಳ್ಳಿಮೈಸೂರಿನ 8 ವರ್ಷದ ಬಾಲಕಿಯೊಬ್ಬಳಿಗೆ ಪ್ಲೇಟ್ಲೆಟ್ಸ್ ಕಡಿಮೆಯಾಗಿ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ರಕ್ತದೊತ್ತಡ ಕಡಿಮೆ ಆಗಿತ್ತು. ಅಲ್ಲಿಂದ ಹಾಸನದ ಹಿಮ್ಸ್ಗೆ ದಾಖಲಿಸಲಾಗಿತ್ತು. ಅಲ್ಲಿ ಬಾಲಕಿ ಮೃತಪಟ್ಟಿದ್ದಳು.</p>.<p>‘ಡೆಂಗಿ ಪರೀಕ್ಷೆ ಮಾಡಲು ಇಲ್ಲಿನ ಪ್ರಯೋಗಾಲಯದಲ್ಲಿ ಕೆಲವು ದಿನಗಳಿಂದ ಅಗತ್ಯ ಪರಿಕರಗಳು ಇಲ್ಲದಾಗಿವೆ ಎಂದು ಪ್ರಯೋಗಾಲಯದ ಸಿಬ್ಬಂದಿ ಹೇಳುತ್ತಿದ್ದಾರೆ. ಹೊರಗಡೆ ಖಾಸಗಿ ಪ್ರಯೋಗಾಲಯದಲ್ಲಿ ಬಡರೋಗಿಗಳೂ ₹ 600 ರಿಂದ ₹ 800 ಪಾವತಿಸಿ, ರಕ್ತಪರೀಕ್ಷೆ ಮಾಡಿಸಿಕೊಳ್ಳಬೇಕಿದೆ. ಜಿಲ್ಲಾಡಳಿತ ಸೂಕ್ತ ಕ್ರಮ ತೆಗೆದುಕೊಂಡು ಪ್ರಯೋಗಾಲಯಕ್ಕೆ ಬೇಕಾದ ಅಗತ್ಯ ಪರಿಕರಗಳನ್ನು ನೀಡಿ ಬಡರೋಗಿಗಳಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು’ ಎಂದು ಜನರು ಆಗ್ರಹಿಸಿದ್ದಾರೆ.</p>.<p>‘ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಅನಾರೋಗ್ಯದಿಂದ ನರಳುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಯಾವುದೇ ಕ್ರಮ ತೆಗದುಕೊಳ್ಳುತ್ತಿಲ್ಲ’ ಎಂದು ಸಾರ್ವಜನಿಕರು ದೂರಿದ್ದಾರೆ.</p>.<p>ಆರಂಭದಲ್ಲಿ ಜ್ವರ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ತೆಗೆದುಕೊಳ್ಳಲಾಗುತ್ತಿದೆ. ಜ್ವರ ಹೆಚ್ಚಾಗುತ್ತಿದ್ದಂತೆಯೇ ಜನರು ನೇರವಾಗಿ ತಾಲ್ಲೂಕು ಆಸ್ಪತ್ರೆಗೆ ಬರುತ್ತಿದ್ದು, ಪ್ಲೇಟ್ಲೆಟ್ಗಳ ಸಂಖ್ಯೆ ಕಡಿಮೆ ಆದವರನ್ನು ದಾಖಲು ಮಾಡಿಕೊಳ್ಳಲಾಗುತ್ತಿದೆ.</p>.<p>ನಿತ್ಯ ಇಲ್ಲಿಗೆ ಬರುವವರ ಪೈಕಿ ಶೇ 10 ರಷ್ಟು ಜನರು ಆಸ್ಪತ್ರೆಯಲ್ಲಿ ದಾಖಲಾಗುತ್ತಿದ್ದಾರೆ. ರೋಗಿಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.</p>.<p>‘ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬರುವವರು ಮೊದಲು ₹10 ನೀಡಿ ರಶೀದಿ ಪಡೆಯಬೇಕು. ಈ ರಶೀದಿ ಪಡೆದುಕೊಳ್ಳಲು ಹೆಚ್ಚು ಸಮಯ ಸರದಿಯಲ್ಲಿ ನಿಲ್ಲಬೇಕಾದ ಅನಿವಾರ್ಯತೆ ಇದ್ದು, ಹೆಚ್ಚು ಕೌಂಟರ್ಗಳನ್ನು ತೆರೆಯಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><blockquote><strong>ಒಳರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹಾಸಿಗೆಗಳು ಭರ್ತಿ ಆಗಿದ್ದು ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಸಮಸ್ಯೆ ಆಗಲಿದೆ. </strong></blockquote><span class="attribution">-ಡಾ.ಧನಶೇಖರ್ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ</span></div>.<div><blockquote>ರಕ್ತ ಪರೀಕ್ಷೆ ಮಾಡಿಸಿದಾಗ ಬಹುತೇಕ ಎಲ್ಲರಿಗೂ ಪ್ಲೇಟ್ಲೆಟ್ಸ್ ಕಡಿಮೆ ಆಗಿರುವುದು ತಿಳಿಯುತ್ತಿದೆ. ಡೆಂಗಿಗೆ ತುತ್ತಾಗಿದ್ದರೆ ಪ್ಲೇಟ್ಲೆಟ್ಸ್ ಕಡಿಮೆ ಆಗುತ್ತದೆ. </blockquote><span class="attribution">-ಡಾ. ಸೆಲ್ವಕುಮಾರ್ ಸರ್ಕಾರಿ ಆಸ್ಪತ್ರೆಯ ವೈದ್ಯ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>