‘ಪ್ರಜ್ವಲ್ ರೇವಣ್ಣ ಅವರನ್ನು ನೋಡಿ ಎಚ್.ಡಿ.ಕುಮಾರಸ್ವಾಮಿ ಸಂಸ್ಕಾರ ಕಲಿಯಲಿ’ ಎಂಬ ಮಂಡ್ಯ ಸಂಸದೆ ಸುಮಲತಾ ಹೇಳಿಕೆಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದ ಅವರು, ‘ಅಕ್ರಮ ಗಣಿಗಾರಿಕೆ ಮಾಡಿದ್ದರೆ ತನಿಖೆ ನಡೆಸಲಿ. ಸರ್ಕಾರದ ಹಣ ಲೂಟಿ ಮಾಡುತ್ತಿರುವವರನ್ನು ಬಲಿ ಹಾಕಲಿ. ಅದು ಬಿಟ್ಟು ಕುಮಾರಸ್ವಾಮಿ ಹಣ ಹೊಡೆಯುತ್ತಾರೆ ಅಂದ್ರೆ ಏನರ್ಥ. ಗೌಡರ ಕುಟುಂಬ ಯಾವುದಾದರೂ ಶಾಲೆ, ಕಾಲೇಜು ಮತ್ತು ಕ್ರಷರ್ ನಡೆಸುತ್ತಿದೆಯೇ’ ಎಂದು ಪ್ರಶ್ನಿಸಿದರು.