ನಗರದ ಗಾಂಧಿ ಬಜಾರ್ನ ನೀರುವಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ 4 ರಿಂದ ರಾಮತಾರಕ, ಹನುಮ ಸಹಸ್ರ ಹೋಮ ನಡೆದವು. ನಂತರ ದೇವರಿಗೆ ಬೆಣ್ಣೆ ಅಲಂಕಾರ ಮಾಡಲಾಗಿತ್ತು. ಪವಮಾನ ಹಾಗೂ ಪಂಚಾಮೃತ ಅಭಿಷೇಕ ನೆರವೇರಿತು. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಮಾಡಲಾಯಿತು. ಕೋವಿಡ್ ಹಿನ್ನೆಲೆ ಪರಸ್ಪರ ಅಂತರ ಕಾಪಾಡಿಕೊಂಡು ಸರದಿ ಸಾಲಿನಲ್ಲಿ ಬಂದು ಭಕ್ತರು ದೇವರ ದರ್ಶನ ಪಡೆದರು.