ಹೊಳೆನರಸೀಪುರ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₹ 25 ಲಕ್ಷ ನಗದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಹಾಸನ–ಮೈಸೂರು ರಸ್ತೆಯ ಹಳ್ಳಿ ಮೈಸೂರು ಕ್ರಾಸ್ ಬಳಿ ಕಾರು ತಪಾಸಣೆ ಮಾಡಿದಾಗ ₹ 25 ಲಕ್ಷ ನಗದು ಪತ್ತೆಯಾಗಿದ್ದು, ಹಣದೊಂದಿಗೆ ಚಾಲಕನನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.
ದಳಪತಿಗಳು ಹಾಗೂ ಅವರ ಬೆಂಬಲಿಗರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.