ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ: ದಾಖಲೆಯಿದ್ದರೆ ಕೋರ್ಟ್‌ಗೆ ಹೋಗಲಿ-ಪ್ರಜ್ವಲ್‌

ಎ.ಮಂಜು ಆರೋಪಕ್ಕೆ ತಿರುಗೇಟು
Last Updated 22 ಏಪ್ರಿಲ್ 2019, 12:48 IST
ಅಕ್ಷರ ಗಾತ್ರ

ಹಾಸನ: ನಾಮಪತ್ರ ಸಲ್ಲಿಕೆ ವೇಳೆ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಲಾಗಿದೆ ಎಂಬ ಬಿಜೆಪಿ ಅಭ್ಯರ್ಥಿ ಎ.ಮಂಜು ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮೈತ್ರಿ ಕೂಟದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ, ದಾಖಲೆ ಇದ್ದರೆ ಕೋರ್ಟ್‌ಗೆ ಹೋಗಲಿ ಎಂದು ತಿರುಗೇಟು ನೀಡಿದರು.

‘ಚುನಾವಣೆ ಸಂದರ್ಭದಲ್ಲಿ ಕಪ್ಪು ಚುಕ್ಕಿ ತರುವ ಕೆಲಸ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಪ್ರಶ್ನಿಸುವ ಹಕ್ಕುಇದೆ. ನಾನು ಕಂಪನಿಗೆ ರಾಜೀನಾಮೆ ನೀಡಿ ಆರು ತಿಂಗಳಾಗಿದೆ. ಅದಕ್ಕೆ ನಿರಕ್ಷೇಪಣಾ ಪತ್ರ ಸಹ ಇದೆ. ಈಗಲೂ ಕಂಪನಿ ವೆಬ್‌ಸೈಟ್‌ನಲ್ಲಿ ನನ್ನ ಹೆಸರು ಇದ್ದರೆ ಅದಕ್ಕೆ ನಾನು ಹೊಣೆಯಲ್ಲ’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ ಜನಾರ್ಶೀವಾದ ಇಲ್ಲದ ಸಂದರ್ಭದಲ್ಲಿ ಅಭ್ಯರ್ಥಿ ಬೇರೆ ದಾರಿ ಹುಡುಕುತ್ತಾರೆ. ನ್ಯಾಯಾಲಯದ ಮುಂದೆ ಪ್ರತಿಯೊಬ್ಬರು ತಲೆ ಬಾಗಲೇಬೇಕು. ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕೋರ್ಟ್‌ಗೆ ನೀಡುತ್ತೇವೆ. ನನಗೆ ವಿಚಾರಣೆಗೆ ಹಾಜರಾಗುವಂತೆ ಜಿಲ್ಲಾ ಚುನಾವಣಾಧಿಕಾರಿ ನೋಟಿಸ್‌ ಸಹ ನೀಡಿಲ್ಲ. ಹೀಗಿರುವಾಗ ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT