ಹೊಸ ಯೋಜನೆಗಳಿಗೆ ಹಣ ನೀಡುವಂತೆ ಕೇಳುತ್ತಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ಆಡಳಿತಾತ್ಮಕ ಮಂಜೂರಾತಿ ದೊರೆತಿರುವ ಕಾಮಗಾರಿಗೆ ಅನುದಾನ ನೀಡುವಂತೆಸಿ.ಎಂ ಗೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಕೇವಲ ಬಿಜೆಪಿಶಾಸಕರ ಕ್ಷೇತ್ರಗಳಿಗೆ ಮಾತ್ರ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಶಾಸಕಾಂಗಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಜತೆ ಶಾಸಕರು ಚರ್ಚೆ ನಡೆಸಿದ್ದು, ವಿಧಾನಸಭಾಧ್ಯಕ್ಷರಿಗೂ ಈ ವಿಷಯ ತಿಳಿಸಲಾಗಿದೆ. ಪಕ್ಷದ ಎಲ್ಲ ಶಾಸಕರು ಧರಣಿಯಲ್ಲಿ ಭಾಗವಹಿಸುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.