<p><strong>ಹೊಳೆನರಸೀಪುರ:</strong> ತಾಲ್ಲೂಕಿನ ಮಾಚಗೌಡನಹಳ್ಳಿ ಸಮೀಪದ ಮೂಡಲಕೊಪ್ಪಲು ಗ್ರಾಮದ ಸುತ್ತಮುತ್ತ ಅಕ್ರಮ ಕಲ್ಲುಗಣಿಗಾರಿಗೆ ನಡೆಯುತ್ತಿದೆ.</p>.<p>ಸ್ಫೋಟಕಗಳನ್ನು ಬಳಸಿ ಸಿಡಿಸಿ ಕಲ್ಲುಗಳ ಸಾಗಣೆಯಲ್ಲಿ ಗಾಣೆಯಲ್ಲಿ ತೊಡಗಿರುವುದರಿಂದ ಸುತ್ತಲಿನ ಗ್ರಾಮಸ್ಥರಿಗೆ ತೀವ್ರ ತೊಂದರೆ ಆಗಿದೆ.</p>.<p>ಮೂಡಲಕೊಪ್ಪಲು ಗ್ರಾಮದಿಂದ ಹರದನಹಳ್ಳಿ ಶಾಲೆಗೆ ಹೋಗುವ ಮಕ್ಕಳಿಗೆ ತೊಂದರೆ ಆಗಿದ್ದಲ್ಲದೆ, ಕಲ್ಲಿನ ಪುಡಿ ಹಾರಿ ಬಿದ್ದು ಜಾನುವಾರುಗಳಿಗೆ ಮೇಯಲು ಹುಲ್ಲು, ಹಸಿರು ಸಿಗದಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>ಗೂಂಡಾ ವರ್ತನೆಯ ಕೆಲವರು ಈ ಅಕ್ರಮ ಕಲ್ಲು ಸಾಗಾಣಿಕೆಯಲ್ಲಿ ತೊಡಗಿದ್ದು ಅವರ ವಿರುದ್ಧ ಮಾತನಾಡಲು ಜನ ಭಯಪಡುತ್ತಿದ್ದಾರೆ.</p>.<p>ಇತ್ತೀಚೆಗೆ ಚಾಕೇನಹಳ್ಳಿ ಸ್ಫೋಟ ಘಟನೆಯಲ್ಲಿ ಮೂವರು ಸಾವನಪ್ಪಿದ್ದಾರೆ. ಮತ್ತೆ ಅಂಥದ್ದೇ ಸ್ಫೋಟಕಗಳನ್ನು ಬಳಸಿ ಕಲ್ಲುಗಳನ್ನು ಸಿಡಿಸಿ ಸಾಗಿಸುತ್ತಿರುವುದು ನಡೆದಿದೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಅಕ್ರಮ ಕಲ್ಲು ಸಾಗಾಣಿಕೆ ತಡೆಗಟ್ಟಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>ಈ ಘಟನೆಯ ಬಗ್ಗೆ ಗ್ರೇಡ್ 2 ತಹಶೀಲ್ದಾರ್ ರವಿ ಅವರ ಗಮನಕ್ಕೆ ತಂದಾಗ, ‘ಗ್ರಾಮಸ್ಥರು ಈ ಬಗ್ಗೆ ನನಗೆ ಮೌಕಿಕವಾಗಿ ತಿಳಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿ, ಅವರ ಆದೇಶದಂತೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ:</strong> ತಾಲ್ಲೂಕಿನ ಮಾಚಗೌಡನಹಳ್ಳಿ ಸಮೀಪದ ಮೂಡಲಕೊಪ್ಪಲು ಗ್ರಾಮದ ಸುತ್ತಮುತ್ತ ಅಕ್ರಮ ಕಲ್ಲುಗಣಿಗಾರಿಗೆ ನಡೆಯುತ್ತಿದೆ.</p>.<p>ಸ್ಫೋಟಕಗಳನ್ನು ಬಳಸಿ ಸಿಡಿಸಿ ಕಲ್ಲುಗಳ ಸಾಗಣೆಯಲ್ಲಿ ಗಾಣೆಯಲ್ಲಿ ತೊಡಗಿರುವುದರಿಂದ ಸುತ್ತಲಿನ ಗ್ರಾಮಸ್ಥರಿಗೆ ತೀವ್ರ ತೊಂದರೆ ಆಗಿದೆ.</p>.<p>ಮೂಡಲಕೊಪ್ಪಲು ಗ್ರಾಮದಿಂದ ಹರದನಹಳ್ಳಿ ಶಾಲೆಗೆ ಹೋಗುವ ಮಕ್ಕಳಿಗೆ ತೊಂದರೆ ಆಗಿದ್ದಲ್ಲದೆ, ಕಲ್ಲಿನ ಪುಡಿ ಹಾರಿ ಬಿದ್ದು ಜಾನುವಾರುಗಳಿಗೆ ಮೇಯಲು ಹುಲ್ಲು, ಹಸಿರು ಸಿಗದಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>ಗೂಂಡಾ ವರ್ತನೆಯ ಕೆಲವರು ಈ ಅಕ್ರಮ ಕಲ್ಲು ಸಾಗಾಣಿಕೆಯಲ್ಲಿ ತೊಡಗಿದ್ದು ಅವರ ವಿರುದ್ಧ ಮಾತನಾಡಲು ಜನ ಭಯಪಡುತ್ತಿದ್ದಾರೆ.</p>.<p>ಇತ್ತೀಚೆಗೆ ಚಾಕೇನಹಳ್ಳಿ ಸ್ಫೋಟ ಘಟನೆಯಲ್ಲಿ ಮೂವರು ಸಾವನಪ್ಪಿದ್ದಾರೆ. ಮತ್ತೆ ಅಂಥದ್ದೇ ಸ್ಫೋಟಕಗಳನ್ನು ಬಳಸಿ ಕಲ್ಲುಗಳನ್ನು ಸಿಡಿಸಿ ಸಾಗಿಸುತ್ತಿರುವುದು ನಡೆದಿದೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಅಕ್ರಮ ಕಲ್ಲು ಸಾಗಾಣಿಕೆ ತಡೆಗಟ್ಟಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>ಈ ಘಟನೆಯ ಬಗ್ಗೆ ಗ್ರೇಡ್ 2 ತಹಶೀಲ್ದಾರ್ ರವಿ ಅವರ ಗಮನಕ್ಕೆ ತಂದಾಗ, ‘ಗ್ರಾಮಸ್ಥರು ಈ ಬಗ್ಗೆ ನನಗೆ ಮೌಕಿಕವಾಗಿ ತಿಳಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿ, ಅವರ ಆದೇಶದಂತೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>