<p><strong>ಚನ್ನರಾಯಪಟ್ಟಣ:</strong> ಅಂಗವಿಕಲರು ಎಂಬ ಕೀಳರಿಮೆ ಬೇಡ. ಬದುಕಿನಲ್ಲಿ ಅತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಲು ಅನುಕೂಲವಾಗುವಂತೆ ಅಗತ್ಯ ಸಲಕರಣೆಗಳನ್ನು ವಿತರಿಸಲಾಗುತ್ತಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಸೋಮವಾರ 130 ಅಂಗವಿಕಲರಿಗೆ ಅಂದಾಜು ₹14.30 ಲಕ್ಷ ವೆಚ್ಚದಲ್ಲಿ ಅಗತ್ಯ ಸಲಕರಣೆಗಳನ್ನು ಹಸ್ತಾಂತರಿಸಿ ಅವರು ಮಾತನಾಡಿದರು.</p>.<p>‘ಕೇಂದ್ರ ಮತ್ತು ರಾಜ್ಯಸರ್ಕಾರಗಳು ವಿವಿಧ ಯೋಜನೆಗಳ ಮೂಲಕ ಅನುಕೂಲ ಕಲ್ಪಿಸುತ್ತಿವೆ. ಉತ್ತಮ ಬದುಕು ಕಟ್ಟಿಕೊಳ್ಳಲು ಸರ್ಕಾರ ನೀಡುವ ಯೋಜನೆಗಳು ಪ್ರಯೋಜನವಾಗಿವೆ. ಇದರಿಂದ ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು ಅವಕಾಶವಾಗುತ್ತದೆ. ಪ್ರತಿ ವರ್ಷ ಅಂಗವಿಕಲರಿಗೆ ಸವಲತ್ತು ನೀಡಲಾಗುತ್ತಿದೆ’ ಎಂದರು.</p>.<p>‘ತಾಲ್ಲೂಕಿನಲ್ಲಿ ಇನ್ನೂ ಹಲವು ಅಂಗವಿಕಲರು ಇದ್ದು, ಅವರಿಗೆ ಇನ್ನೂ 30 ದಿನದೊಳಗೆ ಅಗತ್ಯ ಸಲಕರಣೆಗಳನ್ನು ವಿತರಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಸಂಬಂಧಪಟ್ಟವರು ಅಂಗವಿಕಲ ಕಲ್ಯಾಣಾಧಿಕಾರಿ ಸುಬ್ರಹ್ಮಣ್ಯ ಬಳಿ ಹೆಸರು ನೋಂದಾಯಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಶಾಸಕರ ಅನುದಾನದಲ್ಲಿ ಇದುವರೆಗೆ 250 ಅಂಗವಿಕಲರಿಗೆ ಮೂರು ಚಕ್ರದ ಮೋಟರ್ ಸೈಕಲ್ ಹಸ್ತಾಂತರಿಸಿದ್ದು, ಇನ್ನು ಬೇಡಿಕೆ ಇದೆ. ಅನುದಾನದ ಲಭ್ಯತೆ ಆಧರಿಸಿ ಮೋಟರ್ ಸೈಕಲ್ ವಿತರಿಸಲು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ಆರ್. ಹರೀಶ್, ಅಧಿಕಾರಿಗಳಾದ ಅಭಿಷೇಕ್ಕುಮಾರ್, ಸುಬ್ರಹ್ಮಣ್ಯ, ಮುಖಂಡ ಶಂಕರಲಿಂಗೇ ಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ:</strong> ಅಂಗವಿಕಲರು ಎಂಬ ಕೀಳರಿಮೆ ಬೇಡ. ಬದುಕಿನಲ್ಲಿ ಅತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಲು ಅನುಕೂಲವಾಗುವಂತೆ ಅಗತ್ಯ ಸಲಕರಣೆಗಳನ್ನು ವಿತರಿಸಲಾಗುತ್ತಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಸೋಮವಾರ 130 ಅಂಗವಿಕಲರಿಗೆ ಅಂದಾಜು ₹14.30 ಲಕ್ಷ ವೆಚ್ಚದಲ್ಲಿ ಅಗತ್ಯ ಸಲಕರಣೆಗಳನ್ನು ಹಸ್ತಾಂತರಿಸಿ ಅವರು ಮಾತನಾಡಿದರು.</p>.<p>‘ಕೇಂದ್ರ ಮತ್ತು ರಾಜ್ಯಸರ್ಕಾರಗಳು ವಿವಿಧ ಯೋಜನೆಗಳ ಮೂಲಕ ಅನುಕೂಲ ಕಲ್ಪಿಸುತ್ತಿವೆ. ಉತ್ತಮ ಬದುಕು ಕಟ್ಟಿಕೊಳ್ಳಲು ಸರ್ಕಾರ ನೀಡುವ ಯೋಜನೆಗಳು ಪ್ರಯೋಜನವಾಗಿವೆ. ಇದರಿಂದ ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು ಅವಕಾಶವಾಗುತ್ತದೆ. ಪ್ರತಿ ವರ್ಷ ಅಂಗವಿಕಲರಿಗೆ ಸವಲತ್ತು ನೀಡಲಾಗುತ್ತಿದೆ’ ಎಂದರು.</p>.<p>‘ತಾಲ್ಲೂಕಿನಲ್ಲಿ ಇನ್ನೂ ಹಲವು ಅಂಗವಿಕಲರು ಇದ್ದು, ಅವರಿಗೆ ಇನ್ನೂ 30 ದಿನದೊಳಗೆ ಅಗತ್ಯ ಸಲಕರಣೆಗಳನ್ನು ವಿತರಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಸಂಬಂಧಪಟ್ಟವರು ಅಂಗವಿಕಲ ಕಲ್ಯಾಣಾಧಿಕಾರಿ ಸುಬ್ರಹ್ಮಣ್ಯ ಬಳಿ ಹೆಸರು ನೋಂದಾಯಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಶಾಸಕರ ಅನುದಾನದಲ್ಲಿ ಇದುವರೆಗೆ 250 ಅಂಗವಿಕಲರಿಗೆ ಮೂರು ಚಕ್ರದ ಮೋಟರ್ ಸೈಕಲ್ ಹಸ್ತಾಂತರಿಸಿದ್ದು, ಇನ್ನು ಬೇಡಿಕೆ ಇದೆ. ಅನುದಾನದ ಲಭ್ಯತೆ ಆಧರಿಸಿ ಮೋಟರ್ ಸೈಕಲ್ ವಿತರಿಸಲು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ಆರ್. ಹರೀಶ್, ಅಧಿಕಾರಿಗಳಾದ ಅಭಿಷೇಕ್ಕುಮಾರ್, ಸುಬ್ರಹ್ಮಣ್ಯ, ಮುಖಂಡ ಶಂಕರಲಿಂಗೇ ಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>