‘ಕುಮಾರೇಗೌಡ ವಿರುದ್ಧ 307, 354 ಜಾತಿ ನಿಂದನೆ ಕಾಯ್ದೆ ಅಡಿ ಕೇಸುದಾಖಲಾಗಿದ್ದರೂ ಆರೋಪಿಯನ್ನು ಬಂಧಿಸಿಲ್ಲ. ಎಸ್.ಐ ಪಾಟೀಲ್ ಅವರುಆರೋಪಿಯನ್ನು ಠಾಣೆಗೆ ಕರೆಸಿ, ಅವರ ಎದುರೇ ನಮಗೆ ಬೈದು ಕಳಿಸಿದ್ದಾರೆ. ಜಮೀನು ಪ್ರಕರಣ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಇರುವುದರಿಂದ ತೀರ್ಪು ಬರುವವರೆಗೂ ಅಲ್ಲಿ ಯಾವುದೇ ಕೆಲಸ ಮಾಡದಂತೆ ತಡೆ ನೀಡಬೇಕು. ಪೊಲೀಸರಿಂದಲೂ ನ್ಯಾಯ, ರಕ್ಷಣೆ ಸಿಗದ ಕಾರಣ ಇಡೀ ಕುಟುಂಬಕ್ಕೆ ದಯಾ ಮರಣಕ್ಕೆ ಅವಕಾಶ ಮಾಡಿಕೊಡಬೇಕು’ ಎಂದು ಮನವಿ ಮಾಡಿದರು.