ಟಿಪ್ಪು ನಗರದ ನಿವಾಸಿಯಾದ ಮೆಹಬೂಬ್ ಷಾಷಾ ಅವರು ಲಾಕ್ ಡೌನ್ ಘೋಷಣೆಯಾದ ದಿನದಿಂದಲೂ ತರಕಾರಿಯನ್ನು ವಿತರಣೆ ಟೊಮೆಟೊ, ಬೀನ್ಸ್, ಕ್ಯಾಪ್ಶಿಕಂ ಸೇರಿದಂತೆ ವಿವಿಧ ತರಕಾರಿ, ಸೊಪ್ಪು, ಬಾಳೆಹಣ್ಣು ಖರೀದಿಸಿ, ಬಡವರು ಹೆಚ್ಚಾಗಿ ವಾಸಿಸುವ ಬಡಾವಣೆಗಳಲ್ಲಿ ವಿತರಿಸುತ್ತಿದ್ದಾರೆ. ತಾಲ್ಲೂಕು ಆಡಳಿತ ಕೇಂದ್ರವು ತೆರೆದಿರುವ ನಿರಾಶ್ರಿತರ ಕೇಂದ್ರಕ್ಕೂ ತರಕಾರಿಯನ್ನು ಪೂರೈಸುತ್ತಿದ್ದಾರೆ.