<p><strong>ಹಾಸನ:</strong> ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪತ್ನಿ ಸಮೇತರಾಗಿ ಹಾಸನಾಂಬೆ ದೇವಿ ದರ್ಶನ ಪಡೆದರು. ಡಿ.ಕೆ.ಶಿವಕುಮಾರ್ ಅವರಿಗೆ ಮಂಗಳವಾದ್ಯಗಳೊಂದಿಗೆ ಸ್ವಾಗತ ಕೋರಲಾಯಿತು. </p><p>ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ‘ನಾನು, ನನ್ನ ಕುಟುಂಬ, ಶಾಸಕರಾದ ಶಿವಲಿಂಗೇಗೌಡ, ರಾಜೇಗೌಡ ದೇವಿ ದರ್ಶನಕ್ಕೆ ಬಂದಿದ್ದೇವೆ. ನಾನೊಬ್ಬ ಭಕ್ತನಾಗಿ ಬಂದಿದ್ದೇನೆ. ಉಪ ಮುಖ್ಯಮಂತ್ರಿ, ಪಕ್ಷದ ಅಧ್ಯಕ್ಷನಾಗಿ ಬಂದಿಲ್ಲ ಎಂದರು.</p><p>ಐದು ವರ್ಷ ಸತತವಾಗಿ ಬಂದಿದ್ದೆ. ಕಳೆದ ವರ್ಷ ಭಾರತ್ ಜೋಡೋ ಕಾರ್ಯಕ್ರಮದಿಂದ ಬಂದಿರಲಿಲ್ಲ. ತಾಯಿಯ ಆಶೀರ್ವಾದಿಂದ ನಾಡಿನ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದರು.</p><p>ನನಗೆ ದೇವರ ಬಗ್ಗೆ ನಂಬಿಕೆ ಇದೆ. ರಾಜ್ಯದಲ್ಲಿ ಮಳೆ, ಬೆಳೆಯಾಗಿ ಎಲ್ಲರೂ ಸಮೃದ್ದಿಯಾಗಿರಲಿ. ಎಲ್ಲ ವರ್ಗದ ಜನರಿಗೆ ಸುಖ, ಶಾಂತಿ ಸಿಗಲಿ ಎಂದು ಬೇಡಿದ್ದೇನೆ. ಮುಖ್ಯಮಂತ್ರಿ ಕೂಡ ದೇವಿಯ ದರ್ಶನಕ್ಕೆ ಬಂದಿದ್ದರು ಎಂದರು. </p><p>ಮೊದಲು ಭಕ್ತ, ಆಮೇಲೆ ಉಪಮುಖ್ಯಮಂತ್ರಿ, ಆಮೇಲೆ ಪಕ್ಷದ ಅಧ್ಯಕ್ಷ. ಮೂರು ಕೆಲಸ ಮಾಡಲು ಕುಟುಂಬ ಸಮೇತನಾಗಿ ಬಂದಿದ್ದೇನೆ. ಈಗ ಸದ್ಯ ನಮಗೆ ದೇವಿ ಶಕ್ತಿ ಕೊಟ್ಟಿದ್ದಾಳೆ ಎಂದರು. </p><p>136 ಜನ ಜೊತೆಗೆ ಇಬ್ಬರು ಪಕ್ಷೇತರ ಶಾಸಕರು ಶಕ್ತಿ ಸಿಕ್ಕಿದೆ. ಈ ಶಕ್ತಿಯಿಂದ ಎಲ್ಲ ಜನರ ಬದುಕಿನಲ್ಲಿ ಬದಲಾವಣೆ ತರುವಂತಹ ಆಶೀರ್ವಾದ ಆ ತಾಯಿ ಕೊಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.</p><p>ರಾಜಕೀಯದ ಬಗ್ಗೆ ಮಾತನಾಡಲು ಡಿ.ಕೆ. ಶಿವಕುಮಾರ್ ನಿರಾಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪತ್ನಿ ಸಮೇತರಾಗಿ ಹಾಸನಾಂಬೆ ದೇವಿ ದರ್ಶನ ಪಡೆದರು. ಡಿ.ಕೆ.ಶಿವಕುಮಾರ್ ಅವರಿಗೆ ಮಂಗಳವಾದ್ಯಗಳೊಂದಿಗೆ ಸ್ವಾಗತ ಕೋರಲಾಯಿತು. </p><p>ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ‘ನಾನು, ನನ್ನ ಕುಟುಂಬ, ಶಾಸಕರಾದ ಶಿವಲಿಂಗೇಗೌಡ, ರಾಜೇಗೌಡ ದೇವಿ ದರ್ಶನಕ್ಕೆ ಬಂದಿದ್ದೇವೆ. ನಾನೊಬ್ಬ ಭಕ್ತನಾಗಿ ಬಂದಿದ್ದೇನೆ. ಉಪ ಮುಖ್ಯಮಂತ್ರಿ, ಪಕ್ಷದ ಅಧ್ಯಕ್ಷನಾಗಿ ಬಂದಿಲ್ಲ ಎಂದರು.</p><p>ಐದು ವರ್ಷ ಸತತವಾಗಿ ಬಂದಿದ್ದೆ. ಕಳೆದ ವರ್ಷ ಭಾರತ್ ಜೋಡೋ ಕಾರ್ಯಕ್ರಮದಿಂದ ಬಂದಿರಲಿಲ್ಲ. ತಾಯಿಯ ಆಶೀರ್ವಾದಿಂದ ನಾಡಿನ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದರು.</p><p>ನನಗೆ ದೇವರ ಬಗ್ಗೆ ನಂಬಿಕೆ ಇದೆ. ರಾಜ್ಯದಲ್ಲಿ ಮಳೆ, ಬೆಳೆಯಾಗಿ ಎಲ್ಲರೂ ಸಮೃದ್ದಿಯಾಗಿರಲಿ. ಎಲ್ಲ ವರ್ಗದ ಜನರಿಗೆ ಸುಖ, ಶಾಂತಿ ಸಿಗಲಿ ಎಂದು ಬೇಡಿದ್ದೇನೆ. ಮುಖ್ಯಮಂತ್ರಿ ಕೂಡ ದೇವಿಯ ದರ್ಶನಕ್ಕೆ ಬಂದಿದ್ದರು ಎಂದರು. </p><p>ಮೊದಲು ಭಕ್ತ, ಆಮೇಲೆ ಉಪಮುಖ್ಯಮಂತ್ರಿ, ಆಮೇಲೆ ಪಕ್ಷದ ಅಧ್ಯಕ್ಷ. ಮೂರು ಕೆಲಸ ಮಾಡಲು ಕುಟುಂಬ ಸಮೇತನಾಗಿ ಬಂದಿದ್ದೇನೆ. ಈಗ ಸದ್ಯ ನಮಗೆ ದೇವಿ ಶಕ್ತಿ ಕೊಟ್ಟಿದ್ದಾಳೆ ಎಂದರು. </p><p>136 ಜನ ಜೊತೆಗೆ ಇಬ್ಬರು ಪಕ್ಷೇತರ ಶಾಸಕರು ಶಕ್ತಿ ಸಿಕ್ಕಿದೆ. ಈ ಶಕ್ತಿಯಿಂದ ಎಲ್ಲ ಜನರ ಬದುಕಿನಲ್ಲಿ ಬದಲಾವಣೆ ತರುವಂತಹ ಆಶೀರ್ವಾದ ಆ ತಾಯಿ ಕೊಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.</p><p>ರಾಜಕೀಯದ ಬಗ್ಗೆ ಮಾತನಾಡಲು ಡಿ.ಕೆ. ಶಿವಕುಮಾರ್ ನಿರಾಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>