‘ಕುಮಾರಣ್ಣ ನನ್ನ ಹಿತೈಷಿ, ಯಾವಾಗಲೂ ನನ್ನ ಒಳಿತನ್ನೇ ಬಯಸುತ್ತಾರೆ ಎಂದು ನಂಬಿದ್ದೇನೆ. ಪಕ್ಷ ಬೇರೆ ಇದ್ದರೂ ಪ್ರೀತಂಗೌಡ ಬಗ್ಗೆ ಅವರಿಗೆ ಕಾಳಜಿ ಹೆಚ್ಚಿದೆ. ಅವರ ಆಶೀರ್ವಾದವನ್ನು ಸಕಾರಾತ್ಮಕವಾಗಿ ಆಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ. ಯಾರು ಆಕಸ್ಮಿಕವಾಗಿ ಯಾರ ನಾಮಬಲದಲ್ಲಿ ಶಾಸಕರಾದರು, ಸಚಿವರಾದರು, ಯಾವ ಕಾರ್ಯತಂತ್ರ ಬಳಸಿ ಸಿ.ಎಂ ಆಗಿದ್ದರು ಎಂಬುದು ಇಡೀ ರಾಜ್ಯದ ಜನರಿಗೆ ತಿಳಿದಿರುವ ವಿಚಾರ’ ಎಂದರು.