ಹೊಳೆನರಸೀಪುರ ಕ್ಷೇತ್ರದಲ್ಲಿ ದುದ್ದ, ಶಾಂತಿಗ್ರಾಮ, ಉದಯಪುರ, ಹೊಳೆನರಸೀಪುರದಲ್ಲಿ ಖರೀದಿ ಕೇಂದ್ರ ತೆರೆಯಬೇಕು. ಆಯಾ ಕ್ಷೇತ್ರದ ಶಾಸಕರ ಅಭಿಪ್ರಾಯ ಪಡೆದು ಕೇಂದ್ರ ತೆರೆದು, ರೈತರಿಗೆ ಜಾಗೃತಿ ಮೂಡಿಸಬೇಕು. ಮಧ್ಯವರ್ತಿಗಳು ರೈತರ ಪಹಣಿ ನೀಡಿ ರಾಗಿ ಖರೀದಿ ಮಾಡಿ ದಾಸ್ತಾನು ಮಾಡುತ್ತಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.