ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ವೃದ್ಧ ದಂಪತಿ ಕೊಲೆ ಆರೋಪಿ ಕಾಲಿಗೆ ಗುಂಡೇಟು

Last Updated 1 ಸೆಪ್ಟೆಂಬರ್ 2020, 6:27 IST
ಅಕ್ಷರ ಗಾತ್ರ

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಆಲಗೊಂಡನ ಹಳ್ಳಿ ವೃದ್ಧ ದಂಪತಿ‌ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಸಿಪಿಐ ಸಿದ್ದರಾಮೇಶ್ವರ ಗುಂಡು ಹಾರಿಸಿದ್ದಾರೆ.

ಎರಡು ದಿನಗಳ‌ ಹಿಂದೆಯಷ್ಟೇ ತೋಟದ ಮನೆಯಲ್ಲಿ ವಾಸವಾಗಿದ್ದ ದಂಪತಿ ಕೊಲೆ‌ಗೈದು ನಗದು, ಚಿನ್ನಾಭರಣ ದೋಚಲಾಗಿತ್ತು.

ಆರೋಪಿಗಳು ಅಣ್ಣೇನಹಳ್ಳಿಯ ಕೋಳಿ ಫಾರಂನಲ್ಲಿ ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ಕಾರ್ಯಾಚರಣೆ ಆರಂಭಿಸಿದ ಪೊಲೀಸರು, ಶರಣಾಗುವಂತೆ ಎಚ್ಚರಿಕೆ ನೀಡಿ, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ರೌಡಿ ಪ್ರಸಾದ್ ಅಲಿಯಾಸ್ ಗುಂಡ ಎಂಬಾತ ತಪ್ಪಿಸಿಕೊಳ್ಳುವ ವೇಳೆ ಡಿಸಿಐಬಿ ಇನ್ ಸ್ಪೆಕ್ಟರ್ ವಿನಯ್ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ಅಧಿಕಾರಿ ರಕ್ಷಣೆಗೆ ಧಾವಿಸಿದ ಬೇಲೂರು ಸಿಪಿಐ ಸಿದ್ದರಾಮೇಶ್ವರ್ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿ‌, ಬಂಧಿಸಿದರು.

ಗಾಯಗೊಂಡಿರುವ ಆರೋಪಿ ಮತ್ತು ಅಧಿಕಾರಿಯನ್ನು ಹಿಮ್ಸ್‌ನಲ್ಲಿ ದಾಖಲಿಸಲಾಗಿದೆ.

ಬರಗೂರು ಗ್ರಾಮದ ಪ್ರಸಾದ್, ದ್ವಾರಕಿ ಅವರನ್ನು ಬಂಧಿಸಲಾಗಿದೆ. ಇನ್ನು ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಸ್ಥಳಕ್ಕೆ ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ವಿಫುಲ್ ಕುಮಾರ್ ಪೋಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್‌ಗೌಡ, ಎಎಸ್ಪಿ ನಂದಿನಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT