<p>ನುಗ್ಗೇಹಳ್ಳಿ : ಹೋಬಳಿಯ ಹೂವಿನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಗಂಡನ ಮನೆಯವರು ನೀಡಿದ ವರದಕ್ಷಿಣೆ ಕಿರುಕುಳಕ್ಕೆ ಮಾನಸ (22) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br />ಬಾಗೂರು ಹೋಬಳಿ ಕಾಮನಾ<br />ಯಕನಹಳ್ಳಿಯಿಂದ ಕಳೆದ 11 ತಿಂಗಳ ಹಿಂದಷ್ಟೆ ನುಗ್ಗೇಹಳ್ಳಿ ಹೋಬಳಿ ಹೂವಿನಹಳ್ಳಿ ಗ್ರಾಮದ ಕೀರ್ತಿಯೊಂದಿಗೆ ಮದುವೆಯಾಗಿತ್ತು. ಪ್ರಾರಂಭದಲ್ಲಿ ಚೆನ್ನಾಗಿದ್ದ ಸಂಸಾರ ನಂತರ ಗಂಡ ಅತ್ತೆ ಮಾವ ವರದಕ್ಷಿಣೆಗಾಗಿ ಪೀಡಿಸುತ್ತಿದ್ದರು ಎಂದು ಮೃತ ಮಹಿಳೆ ಸಂಬಂಧಿಕರು ಆರೋಪಿಸಿದ್ದಾರೆ.<br />ಶನಿವಾರ ಬೆಳಿಗ್ಗೆ ಮಾನಸಳೊಂದಿಗೆ ಗಂಡ ಹಾಗೂ ಅವರ ತಂದೆ ತಾಯಿ ಜಗಳ ಮಾಡಿದ್ದಾರೆ. ನಂತರ ಮೂವರು ತೋಟಕ್ಕೆ ಹೋದ ಸಂದರ್ಭದಲ್ಲಿ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.</p>.<p>ಈ ಸಂಬಂಧ ಡಿವೈಎಸ್ಪಿ ಲಕ್ಷ್ಮೇಗೌಡ ಹಾಗೂ ವೃತ್ತ ನಿರೀಕ್ಷಕ ಕುಮಾರ್ ತನಿಖೆ ನಡೆಸಿ ಕೀರ್ತಿ, ಅವನ ತಂದೆ ತಾಯಿ<br />ಯನ್ನು ಬಂಧಿಸಲಾಗಿದೆ. ಈ ಸಂಬಂಧ ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯನ್ನು ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನುಗ್ಗೇಹಳ್ಳಿ : ಹೋಬಳಿಯ ಹೂವಿನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಗಂಡನ ಮನೆಯವರು ನೀಡಿದ ವರದಕ್ಷಿಣೆ ಕಿರುಕುಳಕ್ಕೆ ಮಾನಸ (22) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br />ಬಾಗೂರು ಹೋಬಳಿ ಕಾಮನಾ<br />ಯಕನಹಳ್ಳಿಯಿಂದ ಕಳೆದ 11 ತಿಂಗಳ ಹಿಂದಷ್ಟೆ ನುಗ್ಗೇಹಳ್ಳಿ ಹೋಬಳಿ ಹೂವಿನಹಳ್ಳಿ ಗ್ರಾಮದ ಕೀರ್ತಿಯೊಂದಿಗೆ ಮದುವೆಯಾಗಿತ್ತು. ಪ್ರಾರಂಭದಲ್ಲಿ ಚೆನ್ನಾಗಿದ್ದ ಸಂಸಾರ ನಂತರ ಗಂಡ ಅತ್ತೆ ಮಾವ ವರದಕ್ಷಿಣೆಗಾಗಿ ಪೀಡಿಸುತ್ತಿದ್ದರು ಎಂದು ಮೃತ ಮಹಿಳೆ ಸಂಬಂಧಿಕರು ಆರೋಪಿಸಿದ್ದಾರೆ.<br />ಶನಿವಾರ ಬೆಳಿಗ್ಗೆ ಮಾನಸಳೊಂದಿಗೆ ಗಂಡ ಹಾಗೂ ಅವರ ತಂದೆ ತಾಯಿ ಜಗಳ ಮಾಡಿದ್ದಾರೆ. ನಂತರ ಮೂವರು ತೋಟಕ್ಕೆ ಹೋದ ಸಂದರ್ಭದಲ್ಲಿ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.</p>.<p>ಈ ಸಂಬಂಧ ಡಿವೈಎಸ್ಪಿ ಲಕ್ಷ್ಮೇಗೌಡ ಹಾಗೂ ವೃತ್ತ ನಿರೀಕ್ಷಕ ಕುಮಾರ್ ತನಿಖೆ ನಡೆಸಿ ಕೀರ್ತಿ, ಅವನ ತಂದೆ ತಾಯಿ<br />ಯನ್ನು ಬಂಧಿಸಲಾಗಿದೆ. ಈ ಸಂಬಂಧ ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯನ್ನು ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>