ಡ್ರಗ್ ವಿಚಾರ ಮುಂದಿಟ್ಟು ಸರ್ಕಾರ ಜನರ ದಿಕ್ಕು ತಪ್ಪಿಸುತ್ತಿದೆ ಎಂಬ ಕೈ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನವರಿಗೆ ಏನು ಕೆಲಸ ಇದೆ. ಅವರಲ್ಲೇ ಸುಮಾರು ಗುಂಪಾಗಿದೆ, ಎತ್ತು ಏರಿಗೆ, ಕೋಣ ನೀರಿಗೆ ಎನ್ನುವ ಸ್ಥಿತಿ ಇದೆ. ರಾಜ್ಯದಲ್ಲಿ ಬಿಜೆಪಿ ಕೆಲಸ ನೋಡಿ ಕಾಂಗ್ರೆಸ್ ನಾಯಕರಿಗೆ ದಿಗ್ಭ್ರಮೆಯಾಗಿದೆ ಎಂದರು.