<p><strong>ಹಾಸನ: ‘</strong>ನಗರಸಭೆ ಇದೀಗ ಮಹಾನಗರ ಪಾಲಿಕೆಯಾಗಿ ಉನ್ನತೀಕರಣಗೊಂಡಿದ್ದು, ಹೆಚ್ಚಿನ ಅನುದಾನ ತರುವ ಮೂಲಕ ಸ್ವಚ್ಛ ಹಾಗೂ ಸುಂದರ ನಗರವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ’ ಶಾಸಕ ಸ್ವರೂಪ್ ಪ್ರಕಾಶ್ ಭರವಸೆ ನೀಡಿದರು.</p>.<p>ನಗರದ 80 ಅಡಿ ರಸ್ತೆಯ ವಿಶ್ವನಾಥ ನಗರದಲ್ಲಿ ₹ 50 ಲಕ್ಷ ವೆಚ್ಚದ ಕಾಂಕ್ರೀಟ್ ಚರಂಡಿ ಮತ್ತು ಕವರಿಂಗ್ ಸ್ಲ್ಯಾಬ್ ಅಳವಡಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ನಗರದ ಅಭಿವೃದ್ಧಿಗೆ ಎಚ್.ಡಿ. ರೇವಣ್ಣ ಅವರು ಸಚಿವರಾಗಿದ್ದಾಗ ಸಾಕಷ್ಟು ಅನುದಾನ ನೀಡಿ ಸಹಕಾರ ನೀಡಿದ್ದಾರೆ. ಇದೀಗ ಮಹಾನಗರ ಪಾಲಿಕೆ ಆಗಿರುವುದರಿಂದ ರಾಜ್ಯ ಸರ್ಕಾರದಿಂದ ₹ 3 ಕೋಟಿ ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ. ಎಚ್.ಡಿ. ದೇವೇಗೌಡರ ಸಹಕಾರದಲ್ಲಿ ಕೇಂದ್ರದಿಂದಲೂ ಸುಮಾರು ₹ 30 ಕೋಟಿ ಅನುದಾನ ದೊರೆಯುವ ಭರವಸೆ ಇದೆ’ ಎಂದರು.</p>.<p>‘ಮಹಾನಗರ ಪಾಲಿಕೆಗೆ ಸೇರಿರುವ ಹೆಚ್ಚುವರಿ 35 ಹಳ್ಳಿಗಳಲ್ಲಿ ಅನೇಕ ಸಮಸ್ಯೆಗಳಿವೆ. ಅವುಗಳ ಬಗ್ಗೆ ಗ್ರಾಮಸ್ಥರೊಂದಿಗೆ ಚರ್ಚಿಸಿ, ಸುಮಾರು ₹100 ಕೋಟಿಯಿಂದ ₹ 150 ಕೋಟಿ ವೆಚ್ಚದಲ್ಲಿ ಮಹಾನಗರ ಪಾಲಿಕೆಗೆ ಒಳಗೊಂಡ ಗ್ರಾಮಗಳನ್ನು ಅಭಿವೃದ್ಧಿ ಪಡಿಸಲು ಚಿಂತಿಸಲಾಗಿದೆ’ ಎಂದು ಹೇಳಿದರು.</p>.<p>ಮೇಯರ್ ಎಂ.ಚಂದ್ರೇಗೌಡ ಮಾತನಾಡಿ, ‘ಶಾಸಕರ ಸಹಕಾರದಿಂದ ಹಾಸನಕ್ಕೆ ಹೆಚ್ಚಿನ ಅನುದಾನ ತಂದು, ಅಭಿವೃದ್ದಿ ಕೆಲಸ ಮಾಡಲಾಗುವುದು’ ಎಂದರು.</p>.<p>ವಾರ್ಡ್ ಸದಸ್ಯ ಕ್ರಾಂತಿ ಪ್ರಸಾದ್ ತ್ಯಾಗಿ ಮಾತನಾಡಿ, ‘30ನೇ ವಾರ್ಡ್ಗೆ ₹ 10 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಎಚ್.ಡಿ. ರೇವಣ್ಣ ಉಸ್ತುವಾರಿ ಸಚಿವರಾಗಿದ್ದಾಗ 80 ಅಡಿ ರಸ್ತೆ ನಿರ್ಮಿಸಿ, ಈ ಭಾಗದ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಸ್ವರೂಪ್ ಪ್ರಕಾಶ್ ಶಾಸಕರಾದ ಬಳಿಕ ಬಡಾವಣೆಗೆ ಸಾಕಷ್ಟು ಅನುದಾನ ನೀಡಿ ಅಭಿವೃದ್ದಿ ಪಡಿಸುವ ಕೆಲಸ ಮಾಡಿದ್ದಾರೆ’ ಎಂದರು.</p>.<p>ಉಪ ಮೇಯರ್ ಹೇಮಲತಾ, ಎಇಇ ಚೆನ್ನೇಗೌಡ, ಎಇ ಆನಂದ್, ನಗರಸಭೆ ಸದಸ್ಯರು ಹಾಗೂ ಬಡಾವಣೆ ನಿವಾಸಿಗಳು ಹಾಜರಿದ್ದರು.</p>.<div><blockquote>ನಗರ ನಿವಾಸಿಗಳ ಕುಡಿಯುವ ನೀರು ರಸ್ತೆ ಚರಂಡಿ ಸೇರಿದಂತೆ ಎಲ್ಲ ರೀತಿಯ ಸಮಸ್ಯೆಗಳನ್ನೂ ಬಗೆಹರಿಸಲು ಬದ್ಧರಾಗಿದ್ದೇವೆ</blockquote><span class="attribution"> ಎಂ.ಚಂದ್ರೇಗೌಡ ಮೇಯರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: ‘</strong>ನಗರಸಭೆ ಇದೀಗ ಮಹಾನಗರ ಪಾಲಿಕೆಯಾಗಿ ಉನ್ನತೀಕರಣಗೊಂಡಿದ್ದು, ಹೆಚ್ಚಿನ ಅನುದಾನ ತರುವ ಮೂಲಕ ಸ್ವಚ್ಛ ಹಾಗೂ ಸುಂದರ ನಗರವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ’ ಶಾಸಕ ಸ್ವರೂಪ್ ಪ್ರಕಾಶ್ ಭರವಸೆ ನೀಡಿದರು.</p>.<p>ನಗರದ 80 ಅಡಿ ರಸ್ತೆಯ ವಿಶ್ವನಾಥ ನಗರದಲ್ಲಿ ₹ 50 ಲಕ್ಷ ವೆಚ್ಚದ ಕಾಂಕ್ರೀಟ್ ಚರಂಡಿ ಮತ್ತು ಕವರಿಂಗ್ ಸ್ಲ್ಯಾಬ್ ಅಳವಡಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ನಗರದ ಅಭಿವೃದ್ಧಿಗೆ ಎಚ್.ಡಿ. ರೇವಣ್ಣ ಅವರು ಸಚಿವರಾಗಿದ್ದಾಗ ಸಾಕಷ್ಟು ಅನುದಾನ ನೀಡಿ ಸಹಕಾರ ನೀಡಿದ್ದಾರೆ. ಇದೀಗ ಮಹಾನಗರ ಪಾಲಿಕೆ ಆಗಿರುವುದರಿಂದ ರಾಜ್ಯ ಸರ್ಕಾರದಿಂದ ₹ 3 ಕೋಟಿ ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ. ಎಚ್.ಡಿ. ದೇವೇಗೌಡರ ಸಹಕಾರದಲ್ಲಿ ಕೇಂದ್ರದಿಂದಲೂ ಸುಮಾರು ₹ 30 ಕೋಟಿ ಅನುದಾನ ದೊರೆಯುವ ಭರವಸೆ ಇದೆ’ ಎಂದರು.</p>.<p>‘ಮಹಾನಗರ ಪಾಲಿಕೆಗೆ ಸೇರಿರುವ ಹೆಚ್ಚುವರಿ 35 ಹಳ್ಳಿಗಳಲ್ಲಿ ಅನೇಕ ಸಮಸ್ಯೆಗಳಿವೆ. ಅವುಗಳ ಬಗ್ಗೆ ಗ್ರಾಮಸ್ಥರೊಂದಿಗೆ ಚರ್ಚಿಸಿ, ಸುಮಾರು ₹100 ಕೋಟಿಯಿಂದ ₹ 150 ಕೋಟಿ ವೆಚ್ಚದಲ್ಲಿ ಮಹಾನಗರ ಪಾಲಿಕೆಗೆ ಒಳಗೊಂಡ ಗ್ರಾಮಗಳನ್ನು ಅಭಿವೃದ್ಧಿ ಪಡಿಸಲು ಚಿಂತಿಸಲಾಗಿದೆ’ ಎಂದು ಹೇಳಿದರು.</p>.<p>ಮೇಯರ್ ಎಂ.ಚಂದ್ರೇಗೌಡ ಮಾತನಾಡಿ, ‘ಶಾಸಕರ ಸಹಕಾರದಿಂದ ಹಾಸನಕ್ಕೆ ಹೆಚ್ಚಿನ ಅನುದಾನ ತಂದು, ಅಭಿವೃದ್ದಿ ಕೆಲಸ ಮಾಡಲಾಗುವುದು’ ಎಂದರು.</p>.<p>ವಾರ್ಡ್ ಸದಸ್ಯ ಕ್ರಾಂತಿ ಪ್ರಸಾದ್ ತ್ಯಾಗಿ ಮಾತನಾಡಿ, ‘30ನೇ ವಾರ್ಡ್ಗೆ ₹ 10 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಎಚ್.ಡಿ. ರೇವಣ್ಣ ಉಸ್ತುವಾರಿ ಸಚಿವರಾಗಿದ್ದಾಗ 80 ಅಡಿ ರಸ್ತೆ ನಿರ್ಮಿಸಿ, ಈ ಭಾಗದ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಸ್ವರೂಪ್ ಪ್ರಕಾಶ್ ಶಾಸಕರಾದ ಬಳಿಕ ಬಡಾವಣೆಗೆ ಸಾಕಷ್ಟು ಅನುದಾನ ನೀಡಿ ಅಭಿವೃದ್ದಿ ಪಡಿಸುವ ಕೆಲಸ ಮಾಡಿದ್ದಾರೆ’ ಎಂದರು.</p>.<p>ಉಪ ಮೇಯರ್ ಹೇಮಲತಾ, ಎಇಇ ಚೆನ್ನೇಗೌಡ, ಎಇ ಆನಂದ್, ನಗರಸಭೆ ಸದಸ್ಯರು ಹಾಗೂ ಬಡಾವಣೆ ನಿವಾಸಿಗಳು ಹಾಜರಿದ್ದರು.</p>.<div><blockquote>ನಗರ ನಿವಾಸಿಗಳ ಕುಡಿಯುವ ನೀರು ರಸ್ತೆ ಚರಂಡಿ ಸೇರಿದಂತೆ ಎಲ್ಲ ರೀತಿಯ ಸಮಸ್ಯೆಗಳನ್ನೂ ಬಗೆಹರಿಸಲು ಬದ್ಧರಾಗಿದ್ದೇವೆ</blockquote><span class="attribution"> ಎಂ.ಚಂದ್ರೇಗೌಡ ಮೇಯರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>