<p><strong>ಹಾಸನ:</strong> ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಶುಕ್ರವಾರ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.</p>.<p>ನಗರದ ಹೊಸಲೈನ್ ರಸ್ತೆ ಮೂಲಕ ಬೃಹತ್ ಮೆರವಣಿಗೆಯಲ್ಲಿ ಸಾಗಿದ ಸಾವಿರಾರು ಮಂದಿ ಮುಸ್ಲಿಮರು, ಡಿಜೆ ಸಂಗೀತಕ್ಕೆ ಕುಣಿದು ಕುಪ್ಪಳಿಸಿದರೇ, ಕೆಲವೆಡೆ ಪಟಾಕಿ ಸಿಡಿಸಿ ಯುವಕರು ಸಂಭ್ರಮಿಸಿದರು. ಮೆಕ್ಕಾ ಮದಿನಾದ ಪ್ರತಿಕೃತಿಯನ್ನು ಹೊತ್ತ ಮೆರವಣಿಗೆಯಲ್ಲಿ ಇಸ್ಲಾಂ ಧರ್ಮದ ಬಾವುಟಗಳನ್ನು ಯುವಕರು ಪ್ರದರ್ಶಿಸಿದರು.</p>.<p>ನಗರದ ಹಳೆ ಮಟನ್ ಮಾರ್ಕೆಟ್, ಅಮೀರ್ ಮೊಹಲ್ಲಾದ ಬಳಿ ಸೇರಿದ ಮೆರವಣಿಗೆ, ಡಬಲ್ ಟ್ಯಾಂಕ್ ವೃತ್ತದಿಂದ ಹೊರಟು ಹೊಸಲೈನ್, ವಲ್ಲಭಭಾಯಿ ರಸ್ತೆ, ಸಂತೆಪೇಟೆ, ಬಿ.ಎಂ. ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.</p>.<p>ಶಾಸಕ ಸ್ವರೂಪ್ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್ ಸೇರಿದಂತೆ ಹಲವು ಮುಖಂಡರು ಈದ್ ಮಿಲಾದ್ ಮೆರವಣಿಗೆಯಲ್ಲಿ ಭಾವಗಹಿಸಿ, ಕೆಲಕಾಲ ಮೆರವಣಿಗೆಯಲ್ಲಿ ಸಾಗಿದರು.</p>.<p>ಮೆರವಣಿಗೆ ಹಿನ್ನೆಲೆ ಪ್ರಮುಖ ವೃತ್ತ ಹಾಗೂ ರಸ್ತೆಯಲ್ಲಿ ಹಸಿರು ಬಾವುಟ ಹಾಗೂ ಬಂಟಿಂಗ್ಸ್ ರಾರಾಜಿಸುತ್ತಿದ್ದವು. ಹಲವು ಕಡೆ ಶುಭಾಶಯ ಕೋರುವ ಫ್ಲೆಕ್ಸ್, ಬ್ಯಾನರ್ ಮತ್ತು ಪ್ರಮುಖ ವೃತ್ತಗಳಲ್ಲಿ ಬಂಟಿಂಗ್ಸ್ ಕಟ್ಟಲಾಗಿತ್ತು. ಸಿಂಗರಿಸಿದ ಹತ್ತಾರು ವಾಹನಗಳು ಮರೆವಣಿಗೆಯಲ್ಲಿ ಸಾಗಿದವು.</p>.<p>ಮೆರವಣಿಗೆಯಲ್ಲಿ ಸಾಗುವ ದಾರಿಯಲ್ಲಿ ಅಲ್ಲಲ್ಲಿ ತಂಪು ಪಾನಿಯ, ನೀರು, ಐಸ್ ಕ್ರೀಂ ಸೇರಿದಂತೆ ಇತರೆ ಆಹಾರ ಪದಾರ್ಥ ವಿತರಿಸಲಾಗುತ್ತಿತ್ತು. ಮುನ್ನೆಚ್ಚರಿಕ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಎಲ್ಲ ಮಸೀದಿಗಳ ಪ್ರಮುಖ ಧರ್ಮಗುರುಗಳು, ಸಮುದಾಯದ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಶುಕ್ರವಾರ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.</p>.<p>ನಗರದ ಹೊಸಲೈನ್ ರಸ್ತೆ ಮೂಲಕ ಬೃಹತ್ ಮೆರವಣಿಗೆಯಲ್ಲಿ ಸಾಗಿದ ಸಾವಿರಾರು ಮಂದಿ ಮುಸ್ಲಿಮರು, ಡಿಜೆ ಸಂಗೀತಕ್ಕೆ ಕುಣಿದು ಕುಪ್ಪಳಿಸಿದರೇ, ಕೆಲವೆಡೆ ಪಟಾಕಿ ಸಿಡಿಸಿ ಯುವಕರು ಸಂಭ್ರಮಿಸಿದರು. ಮೆಕ್ಕಾ ಮದಿನಾದ ಪ್ರತಿಕೃತಿಯನ್ನು ಹೊತ್ತ ಮೆರವಣಿಗೆಯಲ್ಲಿ ಇಸ್ಲಾಂ ಧರ್ಮದ ಬಾವುಟಗಳನ್ನು ಯುವಕರು ಪ್ರದರ್ಶಿಸಿದರು.</p>.<p>ನಗರದ ಹಳೆ ಮಟನ್ ಮಾರ್ಕೆಟ್, ಅಮೀರ್ ಮೊಹಲ್ಲಾದ ಬಳಿ ಸೇರಿದ ಮೆರವಣಿಗೆ, ಡಬಲ್ ಟ್ಯಾಂಕ್ ವೃತ್ತದಿಂದ ಹೊರಟು ಹೊಸಲೈನ್, ವಲ್ಲಭಭಾಯಿ ರಸ್ತೆ, ಸಂತೆಪೇಟೆ, ಬಿ.ಎಂ. ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.</p>.<p>ಶಾಸಕ ಸ್ವರೂಪ್ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್ ಸೇರಿದಂತೆ ಹಲವು ಮುಖಂಡರು ಈದ್ ಮಿಲಾದ್ ಮೆರವಣಿಗೆಯಲ್ಲಿ ಭಾವಗಹಿಸಿ, ಕೆಲಕಾಲ ಮೆರವಣಿಗೆಯಲ್ಲಿ ಸಾಗಿದರು.</p>.<p>ಮೆರವಣಿಗೆ ಹಿನ್ನೆಲೆ ಪ್ರಮುಖ ವೃತ್ತ ಹಾಗೂ ರಸ್ತೆಯಲ್ಲಿ ಹಸಿರು ಬಾವುಟ ಹಾಗೂ ಬಂಟಿಂಗ್ಸ್ ರಾರಾಜಿಸುತ್ತಿದ್ದವು. ಹಲವು ಕಡೆ ಶುಭಾಶಯ ಕೋರುವ ಫ್ಲೆಕ್ಸ್, ಬ್ಯಾನರ್ ಮತ್ತು ಪ್ರಮುಖ ವೃತ್ತಗಳಲ್ಲಿ ಬಂಟಿಂಗ್ಸ್ ಕಟ್ಟಲಾಗಿತ್ತು. ಸಿಂಗರಿಸಿದ ಹತ್ತಾರು ವಾಹನಗಳು ಮರೆವಣಿಗೆಯಲ್ಲಿ ಸಾಗಿದವು.</p>.<p>ಮೆರವಣಿಗೆಯಲ್ಲಿ ಸಾಗುವ ದಾರಿಯಲ್ಲಿ ಅಲ್ಲಲ್ಲಿ ತಂಪು ಪಾನಿಯ, ನೀರು, ಐಸ್ ಕ್ರೀಂ ಸೇರಿದಂತೆ ಇತರೆ ಆಹಾರ ಪದಾರ್ಥ ವಿತರಿಸಲಾಗುತ್ತಿತ್ತು. ಮುನ್ನೆಚ್ಚರಿಕ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಎಲ್ಲ ಮಸೀದಿಗಳ ಪ್ರಮುಖ ಧರ್ಮಗುರುಗಳು, ಸಮುದಾಯದ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>