<p><strong>ಹಳೇಬೀಡು (ಹಾಸನ):</strong> ಕೆಲಸಕ್ಕೆ ಕರೆದೊಯ್ದು ಕೂಲಿಯನ್ನು ಕೊಡದೇ ಹೋಬಳಿಯ ಚಟ್ನಹಳ್ಳಿ ಗ್ರಾಮದಲ್ಲಿ ಅಕ್ರಮ ಬಂಧನದಲ್ಲಿ ಇರಿಸಲಾಗಿದ್ದ 18 ಕಾರ್ಮಿಕರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಾಗರಾಜ್ ಮತ್ತು ಮೋಹನೇಶ್ ಎಂಬವರನ್ನು ಬಂಧಿಸಲಾಗಿದೆ.</p>.<p>ರೈಲ್ವೆ ನಿಲ್ದಾಣಗಳಲ್ಲಿ ಆಶ್ರಯವಿಲ್ಲದೆ ಇದ್ದ ಜನರನ್ನು ಗುರುತಿಸುತ್ತಿದ್ದ ಆರೋಪಿಗಳು, ಕೆಲಸ ಕೊಡಿಸುವುದಾಗಿ ಹೇಳಿ ಅವರನ್ನು ಕರೆ ತರುತ್ತಿದ್ದರು. ನಂತರ ಶುಂಠಿ ಕೃಷಿ ಕೆಲಸಕ್ಕೆ ಕರೆದೊಯ್ಯುತ್ತಿದ್ದರು. ಕೆಲಸ ಮುಗಿದ ಬಳಿಕ ಅವರಿಗೆ ಕೂಲಿ ನೀಡುತ್ತಿರಲಿಲ್ಲ ಮತ್ತು ಅವರನ್ನೆಲ್ಲ ಒಂದೇ ಜಾಗದಲ್ಲಿ ಬಂಧಿಸಿ ಇರಿಸುತ್ತಿದ್ದರು.</p>.<p>‘ಮೂಲಸೌಲಭ್ಯಗಳಿಲ್ಲದ ಒಂದೇ ಶೆಡ್ನಲ್ಲಿ ಎಲ್ಲರನ್ನೂ ಇರಿಸಲಾಗುತ್ತಿತ್ತು. ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಬೇರೆಯವರ ಜಮೀನಿನಲ್ಲಿ ಕೆಲಸ ಮಾಡಿಸಿ, ರಾತ್ರಿ ಮತ್ತೆ ಶೆಡ್ಗೆ ತಂದು ಬಿಡುತ್ತಿದ್ದರು. ಹೊರಗಿನವರ ಸಂಪರ್ಕ ಸಿಗದಂತೆ ನಿಗಾವಹಿಸಿದ್ದರು’ ಎಂದು ರಕ್ಷಣೆಗೆ ಒಳಗಾದ ಕಾರ್ಮಿಕರೊಬ್ಬರು ತಿಳಿಸಿದರು.</p>.<p>ಕೇರಳ, ಒಡಿಶಾ, ಜಾರ್ಖಂಡ್, ಉತ್ತರ ಪ್ರದೇಶ ಸೇರಿದಂತೆ ಹೊರ ರಾಜ್ಯಗಳ ಕಾರ್ಮಿಕರು ಹಾಗೂ ರಾಜ್ಯದ ಹಾವೇರಿ, ವಿಜಯಪುರ, ಗದಗ ಸೇರಿದಂತೆ ಹಲವೆಡೆಗಳಿಂದ ಬಂದವರು ಇವರಲ್ಲಿದ್ದಾರೆ.</p>.<h2><strong>ಬೆಳಕಿಗೆ ಬಂದಿದ್ದು ಹೀಗೆ:</strong></h2>.<p>ವಿಜಯಪುರ ಜಿಲ್ಲೆಯ ರಜತ್ ಎಂಬಾತ ಇಲ್ಲಿಂದ ತಪ್ಪಿಸಿಕೊಂಡು ಹೋಗಿದ್ದು, ತನ್ನ ಸ್ನೇಹಿತ ಈರಣ್ಣನನ್ನು ಬೇಲೂರಿನಲ್ಲಿ ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿದೆ ಎಂಬ ಮಾಹಿತಿ ಬಹಿರಂಗಪಡಿಸಿದ್ದ.</p>.<p>ಇದನ್ನು ಆಧರಿಸಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ನೇತೃತ್ವದಲ್ಲಿ ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದರು. ಈಗ ರಕ್ಷಿಸಿರುವ ಕಾರ್ಮಿಕರಿಗೆ ಹಾಸನದ ಅಂಬೇಡ್ಕರ್ ಭವನದಲ್ಲಿ ತಾತ್ಕಾಲಿಕ ಆಶ್ರಯ ನೀಡಲಾಗಿದ್ದು, ಅಗತ್ಯ ಸೌಲಭ್ಯ ಒದಗಿಸಲಾಗಿದೆ.</p>.<p>‘ಜೀತಪದ್ದತಿ ನಿಷೇಧ ಕಾಯ್ದೆಯಡಿ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ. ‘ರಕ್ಷಿಸಲಾದ 18 ಮಂದಿಗೆ ಪುನರ್ವಸತಿ, ಆಹಾರ, ವೈದ್ಯಕೀಯ ನೆರವು ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳೇಬೀಡು (ಹಾಸನ):</strong> ಕೆಲಸಕ್ಕೆ ಕರೆದೊಯ್ದು ಕೂಲಿಯನ್ನು ಕೊಡದೇ ಹೋಬಳಿಯ ಚಟ್ನಹಳ್ಳಿ ಗ್ರಾಮದಲ್ಲಿ ಅಕ್ರಮ ಬಂಧನದಲ್ಲಿ ಇರಿಸಲಾಗಿದ್ದ 18 ಕಾರ್ಮಿಕರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಾಗರಾಜ್ ಮತ್ತು ಮೋಹನೇಶ್ ಎಂಬವರನ್ನು ಬಂಧಿಸಲಾಗಿದೆ.</p>.<p>ರೈಲ್ವೆ ನಿಲ್ದಾಣಗಳಲ್ಲಿ ಆಶ್ರಯವಿಲ್ಲದೆ ಇದ್ದ ಜನರನ್ನು ಗುರುತಿಸುತ್ತಿದ್ದ ಆರೋಪಿಗಳು, ಕೆಲಸ ಕೊಡಿಸುವುದಾಗಿ ಹೇಳಿ ಅವರನ್ನು ಕರೆ ತರುತ್ತಿದ್ದರು. ನಂತರ ಶುಂಠಿ ಕೃಷಿ ಕೆಲಸಕ್ಕೆ ಕರೆದೊಯ್ಯುತ್ತಿದ್ದರು. ಕೆಲಸ ಮುಗಿದ ಬಳಿಕ ಅವರಿಗೆ ಕೂಲಿ ನೀಡುತ್ತಿರಲಿಲ್ಲ ಮತ್ತು ಅವರನ್ನೆಲ್ಲ ಒಂದೇ ಜಾಗದಲ್ಲಿ ಬಂಧಿಸಿ ಇರಿಸುತ್ತಿದ್ದರು.</p>.<p>‘ಮೂಲಸೌಲಭ್ಯಗಳಿಲ್ಲದ ಒಂದೇ ಶೆಡ್ನಲ್ಲಿ ಎಲ್ಲರನ್ನೂ ಇರಿಸಲಾಗುತ್ತಿತ್ತು. ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಬೇರೆಯವರ ಜಮೀನಿನಲ್ಲಿ ಕೆಲಸ ಮಾಡಿಸಿ, ರಾತ್ರಿ ಮತ್ತೆ ಶೆಡ್ಗೆ ತಂದು ಬಿಡುತ್ತಿದ್ದರು. ಹೊರಗಿನವರ ಸಂಪರ್ಕ ಸಿಗದಂತೆ ನಿಗಾವಹಿಸಿದ್ದರು’ ಎಂದು ರಕ್ಷಣೆಗೆ ಒಳಗಾದ ಕಾರ್ಮಿಕರೊಬ್ಬರು ತಿಳಿಸಿದರು.</p>.<p>ಕೇರಳ, ಒಡಿಶಾ, ಜಾರ್ಖಂಡ್, ಉತ್ತರ ಪ್ರದೇಶ ಸೇರಿದಂತೆ ಹೊರ ರಾಜ್ಯಗಳ ಕಾರ್ಮಿಕರು ಹಾಗೂ ರಾಜ್ಯದ ಹಾವೇರಿ, ವಿಜಯಪುರ, ಗದಗ ಸೇರಿದಂತೆ ಹಲವೆಡೆಗಳಿಂದ ಬಂದವರು ಇವರಲ್ಲಿದ್ದಾರೆ.</p>.<h2><strong>ಬೆಳಕಿಗೆ ಬಂದಿದ್ದು ಹೀಗೆ:</strong></h2>.<p>ವಿಜಯಪುರ ಜಿಲ್ಲೆಯ ರಜತ್ ಎಂಬಾತ ಇಲ್ಲಿಂದ ತಪ್ಪಿಸಿಕೊಂಡು ಹೋಗಿದ್ದು, ತನ್ನ ಸ್ನೇಹಿತ ಈರಣ್ಣನನ್ನು ಬೇಲೂರಿನಲ್ಲಿ ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿದೆ ಎಂಬ ಮಾಹಿತಿ ಬಹಿರಂಗಪಡಿಸಿದ್ದ.</p>.<p>ಇದನ್ನು ಆಧರಿಸಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ನೇತೃತ್ವದಲ್ಲಿ ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದರು. ಈಗ ರಕ್ಷಿಸಿರುವ ಕಾರ್ಮಿಕರಿಗೆ ಹಾಸನದ ಅಂಬೇಡ್ಕರ್ ಭವನದಲ್ಲಿ ತಾತ್ಕಾಲಿಕ ಆಶ್ರಯ ನೀಡಲಾಗಿದ್ದು, ಅಗತ್ಯ ಸೌಲಭ್ಯ ಒದಗಿಸಲಾಗಿದೆ.</p>.<p>‘ಜೀತಪದ್ದತಿ ನಿಷೇಧ ಕಾಯ್ದೆಯಡಿ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ. ‘ರಕ್ಷಿಸಲಾದ 18 ಮಂದಿಗೆ ಪುನರ್ವಸತಿ, ಆಹಾರ, ವೈದ್ಯಕೀಯ ನೆರವು ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>