ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಹಾಸನ | ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ

ನಗರಸಭೆ ಅಧ್ಯಕ್ಷರ ಪದಚ್ಯುತಿಗೆ ಬಿಜೆಪಿ ಜೊತೆ ಕೈಜೋಡಿಸಿದ ಜೆಡಿಎಸ್‌
Published : 16 ಏಪ್ರಿಲ್ 2025, 5:30 IST
Last Updated : 16 ಏಪ್ರಿಲ್ 2025, 5:30 IST
ಫಾಲೋ ಮಾಡಿ
Comments
ಉಪಾಧ್ಯಕ್ಷ ಸ್ಥಾನಕ್ಕೆ ಹೇಮಲತಾ ಸ್ಪರ್ಧೆ
ನಗರಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆಯುವ ಚುನಾವಣೆಯಲ್ಲಿ ‍‍ಪಕ್ಷದ ಹೇಮಲತಾ ಕಮಲ್‌ಕುಮಾರ್ ಸ್ಪರ್ಧಿಸುತ್ತಿದ್ದು ಅವರಿಗೆ ಬಿಜೆಪಿ ಸದಸ್ಯರ ಸಂಪೂರ್ಣ ಬೆಂಬಲವಿದೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಯೋಗೇಶ್ ಗೌಡ ತಿಳಿಸಿದರು. ಉಪಾಧ್ಯಕ್ಷ ಸ್ಥಾನ ತೆರವಾಗಿದ್ದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡರ ಜೊತೆ ಚರ್ಚಿಸಿ ಹೇಮಲತಾ ಅವರನ್ನು ಕಣಕ್ಕೆ ಇಳಿಸಲಾಗುತ್ತಿದೆ. ಹಲವು ವರ್ಷಗಳಿಂದ ಕಮಲ್ ಕುಮಾರ್ ಅವರು ಬಿಜೆಪಿಯಲ್ಲಿ ಪಕ್ಷ ಸಂಘಟನೆಗೆ ಶ್ರಮಿಸಿದ್ದಾರೆ. ಅವರ ಪತ್ನಿ ಹೇಮಲತಾ ಅವರೇ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಲಿ ಎಂದು ಪಕ್ಷ ತೀರ್ಮಾನಿಸಿದೆ ಎಂದರು. ನಗರಸಭೆ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ. ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾದಲ್ಲಿ ಪ್ರೀತಂ ಗೌಡ ಪಕ್ಷದ ಮುಖಂಡರು ಹಾಗೂ ನಗರಸಭೆ ಬಿಜೆಪಿ ಸದಸ್ಯರೆಲ್ಲ ಸೇರಿ ಒಮ್ಮತದ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಹೇಳಿದರು.
ಬಿಜೆಪಿ ಜೊತೆ ಚರ್ಚಿಸಿ ನಿರ್ಧಾರ
ಸದ್ಯಕ್ಕೆ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈ ಕುರಿತು ಜೆಡಿಎಸ್ ನಾಯಕ ಎಚ್‌.ಡಿ. ರೇವಣ್ಣ ಸಭೆ ಕರೆದಿದ್ದು ಬಿಜೆಪಿ ನಾಯಕರ ಜೊತೆಗೆ ಮಾತುಕತೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಾಸಕ ಸ್ವರೂಪ್‌ ಪ್ರಕಾಶ್ ತಿಳಿಸಿದ್ದಾರೆ. ಒಪ್ಪಂದದಂತೆ ಆರು ತಿಂಗಳಿಗೆ ಹಾಲಿ ಅಧ್ಯಕ್ಷರು ರಾಜೀನಾಮೆ ನೀಡಬೇಕಿತ್ತು. ಮಾತಿಗೆ ತಪ್ಪಿದ್ದಾರೆ. ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡಿಸುವಾಗ ಅವರೇ ಅಧ್ಯಕ್ಷತೆ ವಹಿಸಲು ಬರುವುದಿಲ್ಲ. ಹಾಗಾಗಿ ಉಪಾಧ್ಯಕ್ಷ ಸ್ಥಾನ ಭರ್ತಿ ಆಗಬೇಕು. ಮೊದಲು ಉಪಾಧ್ಯಕ್ಷರ ಚುನಾವಣೆ ನಡೆಯಲಿದೆ. ಮುಂದೆ ಅವಿಶ್ವಾಸ ಮಂಡನೆಯ ಕುರಿತು ದಿನಾಂಕ ನಿಗದಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT