<p><strong>ಸಕಲೇಶಪುರ:</strong> ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಹಾಗೂ ಬಡವರ ಅನ್ನದ ಹೆಸರಿನಲ್ಲಿ ಹಣ ದುರುಪಯೋಗ ಆರೋಪ ಕುರಿತು ‘ಪ್ರಜಾವಾಣಿ’ ‘ಇಂದೀರಾ ಕ್ಯಾಂಟೀನ್: ಬಡವರ ಅನ್ನಕ್ಕೆ ಕನ್ನ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಅದರ ಪರಿಣಾಮ, 5 ತಿಂಗಳಿಂದ ಉಳಿಸಿಕೊಂಡಿದ್ದ ವಿದ್ಯುತ್ ಬಿಲ್ ಬಾಕಿಯನ್ನು ಗುತ್ತಿಗೆದಾರ ಸೆಸ್ಕ್ಗೆ ಪಾವತಿ ಮಾಡಿದ್ದಾರೆ. ಇದೀಗ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.</p>.ಸಕಲೇಶಪುರ | ಇಂದಿರಾ ಕ್ಯಾಂಟೀನ್: ಬಡವರ ಅನ್ನಕ್ಕೆ ಕನ್ನ.<p>ಅಕ್ಕಿ ಹಾಗೂ ದಿನಸಿ ದಾಸ್ತಾನು ವ್ಯವಸ್ಥೆ ಮಾಡಲಾಗಿದೆ. ಉಸ್ತುವಾರಿ ನೋಡಿಕೊಳ್ಳುತ್ತಿದ್ದವರನ್ನು ಬದಲಾವಣೆ ಮಾಡಿ, ಈ ಹಿಂದೆ ಇದ್ದ ನಿಶ್ಚಯ ಎಂಬುವವರನ್ನು ನೇಮಕ ಮಾಡಲಾಗಿದೆ. ಮೂವರು ಸಿಬ್ಬಂದಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಪುರಸಭೆಯಿಂದ ನೀರಿನ ಸಂಪರ್ಕಕ್ಕೆ ಪೈಪ್ ಅಳವಡಿಸಲಾಗಿದೆ.</p>.<p>ಉಪವಿಭಾಗಾಧಿಕಾರಿ ಡಾ.ಶ್ರುತಿ ಕ್ಯಾಂಟೀನ್ಗೆ ಭೇಟಿ ನೀಡಿ ಅವ್ಯವಸ್ಥೆ ಪರಿಶೀಲಿಸಿದ್ದು, ವ್ಯವಸ್ಥೆ ಸರಿಪಡಿಸುವಂತೆ ಗುತ್ತಿಗೆದಾರರಿಗೆ ನೋಟಿಸ್ ನೀಡಿದ್ದಾರೆ. ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು ಪುರಸಭೆ ಮುಖ್ಯಾಧಿಕಾರಿಯನ್ನು ಕಚೇರಿಗೆ ಕರೆಯಿಸಿ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ವಿರುದ್ಧ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ:</strong> ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಹಾಗೂ ಬಡವರ ಅನ್ನದ ಹೆಸರಿನಲ್ಲಿ ಹಣ ದುರುಪಯೋಗ ಆರೋಪ ಕುರಿತು ‘ಪ್ರಜಾವಾಣಿ’ ‘ಇಂದೀರಾ ಕ್ಯಾಂಟೀನ್: ಬಡವರ ಅನ್ನಕ್ಕೆ ಕನ್ನ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಅದರ ಪರಿಣಾಮ, 5 ತಿಂಗಳಿಂದ ಉಳಿಸಿಕೊಂಡಿದ್ದ ವಿದ್ಯುತ್ ಬಿಲ್ ಬಾಕಿಯನ್ನು ಗುತ್ತಿಗೆದಾರ ಸೆಸ್ಕ್ಗೆ ಪಾವತಿ ಮಾಡಿದ್ದಾರೆ. ಇದೀಗ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.</p>.ಸಕಲೇಶಪುರ | ಇಂದಿರಾ ಕ್ಯಾಂಟೀನ್: ಬಡವರ ಅನ್ನಕ್ಕೆ ಕನ್ನ.<p>ಅಕ್ಕಿ ಹಾಗೂ ದಿನಸಿ ದಾಸ್ತಾನು ವ್ಯವಸ್ಥೆ ಮಾಡಲಾಗಿದೆ. ಉಸ್ತುವಾರಿ ನೋಡಿಕೊಳ್ಳುತ್ತಿದ್ದವರನ್ನು ಬದಲಾವಣೆ ಮಾಡಿ, ಈ ಹಿಂದೆ ಇದ್ದ ನಿಶ್ಚಯ ಎಂಬುವವರನ್ನು ನೇಮಕ ಮಾಡಲಾಗಿದೆ. ಮೂವರು ಸಿಬ್ಬಂದಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಪುರಸಭೆಯಿಂದ ನೀರಿನ ಸಂಪರ್ಕಕ್ಕೆ ಪೈಪ್ ಅಳವಡಿಸಲಾಗಿದೆ.</p>.<p>ಉಪವಿಭಾಗಾಧಿಕಾರಿ ಡಾ.ಶ್ರುತಿ ಕ್ಯಾಂಟೀನ್ಗೆ ಭೇಟಿ ನೀಡಿ ಅವ್ಯವಸ್ಥೆ ಪರಿಶೀಲಿಸಿದ್ದು, ವ್ಯವಸ್ಥೆ ಸರಿಪಡಿಸುವಂತೆ ಗುತ್ತಿಗೆದಾರರಿಗೆ ನೋಟಿಸ್ ನೀಡಿದ್ದಾರೆ. ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು ಪುರಸಭೆ ಮುಖ್ಯಾಧಿಕಾರಿಯನ್ನು ಕಚೇರಿಗೆ ಕರೆಯಿಸಿ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ವಿರುದ್ಧ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>