<p><strong>ಕೊಣನೂರು:</strong> ಆಡು, ಕುರಿಗೆ ಸೊಪ್ಪು ಕಡಿಯಲು ಮರ ಏರಿದ್ದಾಗ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಮರದ ಮೇಲೆ ಮೃತಪಟ್ಟಿದ್ದಾರೆ.</p>.<p>ರಾಮನಾಥಪುರ ಹೋಬಳಿಯ ರಾಗಿಮರೂರು ಗ್ರಾಮದ ಧರ್ಮ (38) ಮೃತವ್ಯಕ್ತಿ.</p>.<p>ಭಾನುವಾರ ಮಧ್ಯಾಹ್ನ ಮರ ಏರಿದ ಅವರು, ಅದೇ ಮರದ ಮೇಲೆ ಹಾದುಹೋಗಿದ್ದ ವಿದ್ಯುತ್ ತಂತಿಯನ್ನು ಗಮನಿಸಲಿಲ್ಲ. ಸೊಪ್ಪು ಕಡಿಯುವಾಗ ಮರಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದೆ.</p>.<p>ಧರ್ಮ ಅವರು ಚಾಲಕರಾಗಿದ್ದು, ಭಾನುವಾರ ಕುರಿ ಮೇಯಿಸಲು ಹೋಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೊಣನೂರು:</strong> ಆಡು, ಕುರಿಗೆ ಸೊಪ್ಪು ಕಡಿಯಲು ಮರ ಏರಿದ್ದಾಗ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಮರದ ಮೇಲೆ ಮೃತಪಟ್ಟಿದ್ದಾರೆ.</p>.<p>ರಾಮನಾಥಪುರ ಹೋಬಳಿಯ ರಾಗಿಮರೂರು ಗ್ರಾಮದ ಧರ್ಮ (38) ಮೃತವ್ಯಕ್ತಿ.</p>.<p>ಭಾನುವಾರ ಮಧ್ಯಾಹ್ನ ಮರ ಏರಿದ ಅವರು, ಅದೇ ಮರದ ಮೇಲೆ ಹಾದುಹೋಗಿದ್ದ ವಿದ್ಯುತ್ ತಂತಿಯನ್ನು ಗಮನಿಸಲಿಲ್ಲ. ಸೊಪ್ಪು ಕಡಿಯುವಾಗ ಮರಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದೆ.</p>.<p>ಧರ್ಮ ಅವರು ಚಾಲಕರಾಗಿದ್ದು, ಭಾನುವಾರ ಕುರಿ ಮೇಯಿಸಲು ಹೋಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>