ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡಾನೆ ದಾಳಿಗೆ ಕಂಟೇನರ್ ಚಾಲಕ ಸಾವು

Last Updated 26 ಫೆಬ್ರುವರಿ 2021, 12:21 IST
ಅಕ್ಷರ ಗಾತ್ರ

ಹಾಸನ: ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 75ರ ಕೆಂಪುಹಳ್ಳದ ಬಳಿಯ ರಸ್ತೆ
ಪಕ್ಕ ಕಂಟೇನರ್‌ ನಿಲ್ಲಿಸಿ ಬಹಿರ್ದೆಸೆಗೆ ತೆರಳಿದ್ದ ಚಾಲಕ ಕಾಡಾನೆ ದಾಳಿಗೆ ಸಿಲುಕಿ ಗುರುವಾರ ರಾತ್ರಿ
ಮೃತಪಟ್ಟಿದ್ದಾರೆ.

ರಾಜಸ್ಥಾನದ ಭರತ್‌ಪುರದ ವಾಕಿಲ್‌ (26) ರಾತ್ರಿ 8 ಗಂಟೆಯಲ್ಲಿ ಕಂಟೇನರ್‌ ನಿಲ್ಲಿಸಿ ಬಹಿರ್ದೆಸೆಗೆ ತೆರಳಿದ್ದರು. ಆನೆ ಕಾಲ್ತುಳಿತದಿಂದ ಸ್ಥಳದಲ್ಲೇ ಮೃತಪಟ್ಟಿದ್ದು, ರಸ್ತೆ ಪಕ್ಕ ಶವ ಪತ್ತೆಯಾಗಿದೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT