<p><strong>ಸಕಲೇಶಪುರ: </strong>ಕಾಡಾನೆಗಳು ದಾಳಿ ಮಾಡಿ ಮನೆಯೊಂದರ ಕಿಟಕಿ ಗಾಜು ಒಡೆದು ಬೆಳೆ ಹಾನಿ ಮಾಡಿರುವ ಘಟನೆ ತಾಲ್ಲೂಕಿನ ಕೌಡಹಳ್ಳಿ ಗ್ರಾಮದಲ್ಲಿ ಬುಧವಾರ ಮುಂಜಾನೆ ನಡೆದಿದೆ.</p>.<p>ಸುಮಾರು 20ಕ್ಕೂ ಹೆಚ್ಚು ಆನೆಗಳು ಗ್ರಾಮದ ಇಲ್ಯಾಸ್ ಎಂಬುವವರ ಮನೆಯ ಸುತ್ತಲೂ ದಾಳಿ ಮಾಡಿ, ಬಾಳೆ, ತೆಂಗು, ಕಾಫಿ ಗಿಡಗಳನ್ನು ತಿಂದು ತುಳಿದು ಹಾಕಿವೆ. ಅಲ್ಲದೆ ಕಿಟಕಿಯ ಗಾಜಿಗೆ ಸೊಂಡಿಲಿಂದ ಹೊಡೆದು ಗಾಜು ಪುಡಿಯಾಗಿದ್ದು, ಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.</p>.<p>ಎರಡು ವಾರಗಳಿಂದ ಕೌಡಹಳ್ಳಿ, ಸತ್ತಿಗಾಲ, ಸುಳ್ಳಕ್ಕಿ, ಜಾನೇಕೆರೆ, ಆರೆಕೆರೆ ಭಾಗದಲ್ಲೇ ಆನೆಗಳು ಅಡ್ಡಾಡುತ್ತಿವೆ. ನಾಟಿ ಮಾಡಿರುವ ಹಲವು ರೈತರ ಭತ್ತದ ಬೆಳೆಯನ್ನು ಹಾನಿ ಮಾಡಿವೆ. ತೋಟಗಳಲ್ಲಿ ಮಾತ್ರವಲ್ಲದೆ ಮನೆ ಅಂಗಳ, ಹಿತ್ತಲಲ್ಲಿರುವ ಬಾಳೆ, ತೆಂಗಿನ ಗಿಡಗಳನ್ನೂ ಹಾಳು ಮಾಡಿವೆ.</p>.<p>‘ಎಲ್ಲ ಕಾಡಾನೆಗಳನ್ನು ಸ್ಥಳಾಂತರ ಮಾಡದಿದ್ದರೆ, ತಿನ್ನುವ ಅನ್ನ ಮಾತ್ರವಲ್ಲ ಜೀವವನ್ನೂ ಕಳೆದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಟಿಎಪಿಸಿಎಂಎಸ್ ಅಧ್ಯಕ್ಷ ಕೌಡಹಳ್ಳಿ ಲೋಹಿತ್ ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಸ್ಥಳಕ್ಕೆ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಅಗಸೆ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳೆ ಹಾನಿ ಹಾಗೂ ಜೀವ ಭಯ ಕುರಿತು ಗ್ರಾಮಸ್ಥರು ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ: </strong>ಕಾಡಾನೆಗಳು ದಾಳಿ ಮಾಡಿ ಮನೆಯೊಂದರ ಕಿಟಕಿ ಗಾಜು ಒಡೆದು ಬೆಳೆ ಹಾನಿ ಮಾಡಿರುವ ಘಟನೆ ತಾಲ್ಲೂಕಿನ ಕೌಡಹಳ್ಳಿ ಗ್ರಾಮದಲ್ಲಿ ಬುಧವಾರ ಮುಂಜಾನೆ ನಡೆದಿದೆ.</p>.<p>ಸುಮಾರು 20ಕ್ಕೂ ಹೆಚ್ಚು ಆನೆಗಳು ಗ್ರಾಮದ ಇಲ್ಯಾಸ್ ಎಂಬುವವರ ಮನೆಯ ಸುತ್ತಲೂ ದಾಳಿ ಮಾಡಿ, ಬಾಳೆ, ತೆಂಗು, ಕಾಫಿ ಗಿಡಗಳನ್ನು ತಿಂದು ತುಳಿದು ಹಾಕಿವೆ. ಅಲ್ಲದೆ ಕಿಟಕಿಯ ಗಾಜಿಗೆ ಸೊಂಡಿಲಿಂದ ಹೊಡೆದು ಗಾಜು ಪುಡಿಯಾಗಿದ್ದು, ಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.</p>.<p>ಎರಡು ವಾರಗಳಿಂದ ಕೌಡಹಳ್ಳಿ, ಸತ್ತಿಗಾಲ, ಸುಳ್ಳಕ್ಕಿ, ಜಾನೇಕೆರೆ, ಆರೆಕೆರೆ ಭಾಗದಲ್ಲೇ ಆನೆಗಳು ಅಡ್ಡಾಡುತ್ತಿವೆ. ನಾಟಿ ಮಾಡಿರುವ ಹಲವು ರೈತರ ಭತ್ತದ ಬೆಳೆಯನ್ನು ಹಾನಿ ಮಾಡಿವೆ. ತೋಟಗಳಲ್ಲಿ ಮಾತ್ರವಲ್ಲದೆ ಮನೆ ಅಂಗಳ, ಹಿತ್ತಲಲ್ಲಿರುವ ಬಾಳೆ, ತೆಂಗಿನ ಗಿಡಗಳನ್ನೂ ಹಾಳು ಮಾಡಿವೆ.</p>.<p>‘ಎಲ್ಲ ಕಾಡಾನೆಗಳನ್ನು ಸ್ಥಳಾಂತರ ಮಾಡದಿದ್ದರೆ, ತಿನ್ನುವ ಅನ್ನ ಮಾತ್ರವಲ್ಲ ಜೀವವನ್ನೂ ಕಳೆದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಟಿಎಪಿಸಿಎಂಎಸ್ ಅಧ್ಯಕ್ಷ ಕೌಡಹಳ್ಳಿ ಲೋಹಿತ್ ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಸ್ಥಳಕ್ಕೆ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಅಗಸೆ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳೆ ಹಾನಿ ಹಾಗೂ ಜೀವ ಭಯ ಕುರಿತು ಗ್ರಾಮಸ್ಥರು ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>